ನವದೆಹಲಿ: ಭಾರತ ಪ್ರವಾಸ ಹಮ್ಮಿಕೊಂಡಿದ್ದ ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು, ತಮ್ಮ ದೇಶದ ವಿವಿಧ ಜೈಲುಗಳಲ್ಲಿ ಬಂಧಿತರಾಗಿರುವ ಭಾರತದ ಸುಮಾರು 850 ಕೈದಿಗಳ ಬಿಡುಗಡೆಗೆ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮನವಿಯನ್ನು ಪುರಸ್ಕರಿಸಿ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ವಿವಿಧ ರೀತಿಯ ಆರೋಪಗಳನ್ನು ಎದುರಿಸುತ್ತಿರುವ ಅಪಾರ ಪ್ರಮಾಣದ ಭಾರತೀಯರು ಸೌದಿ ಜೈಲಿಗಳಲ್ಲಿ ಬಂಧಿತರಾಗಿದ್ದಾರೆ. ಭಾರತಕ್ಕೆ ಆಗಮಿಸಿರುವ ಸಲ್ಮಾನ್ ಅವರು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಇತರ ಅಧಿಕಾರಿಗಳೊಂದಿಗೆ ಮಾತುಕತೆಯನ್ನು ನಡೆಸಿ ಸುಮಾರು 850 ಭಾರತೀಯ ಕೈದಿಗಳ ಬಿಡುಗಡೆಗೆ ಆದೇಶಿಸಿದ್ದಾರೆ.
ಬುಧವಾರ ಸೌದಿ ಯುವರಾಜ ಸಲ್ಮಾನ್ ಹಾಗೂ ಪ್ರಧಾನಿ ಮೋದಿಯವರು ದೆಹಲಿಯಲ್ಲಿ ಮಾತುಕತೆಗಳನ್ನು ನಡೆಸಿದ್ದು, ಈ ಮಾತುಕತೆಯ ಬಳಿಕ ಭಾರತ ಸೌದಿ ಪ್ರಜೆಗಳಿಗೆ ಇ-ವೀಸಾ ಸೌಲಭ್ಯವನ್ನು ಘೋಷಣೆ ಮಾಡಿದೆ. ಅಲ್ಲದೇ, ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರಿಗೆ ನೆರವು ನೀಡುವುದಾಗಿ ಸೌದಿ ಯುವರಾಜ ಸಲ್ಮಾನ್ ಹೇಳಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ, ಸೌದಿಯು ಇಂಟರ್ನ್ಯಾಷನಲ್ ಸೋಲಾರ್ ಅಲಾಯನ್ಸ್ನ್ನು ಸೇರ್ಪಡೆಗೊಂಡಿದ್ದು, ಇದನ್ನು ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಸ್ವಾಗತಿಸಿದೆ.
ನವೀಕರಿಸಬಹುದಾದ ಇಂಧನ ಮೂಲದಲ್ಲಿ ಸಹಕಾರ, ಹೂಡಿಕೆ ಮಾತ್ರವಲ್ಲದೇ, ಈ ನಿಟ್ಟಿನ ಸಂಶೋಧನೆ ಮತ್ತು ಅಧ್ಯಯನಗಳಿಗೂ ಸಹಕಾರ ನೀಡುವುದಾಗಿ ಉಭಯ ದೇಶಗಳು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.