ಲಕ್ನೋ: ಪುಲ್ವಾಮ ದಾಳಿಯ ಬಳಿಕ ಭದ್ರತಾ ಪಡೆಗಳು ಹೈ ಅಲರ್ಟ್ನಲ್ಲಿದ್ದು, ಉಗ್ರರನ್ನು ಸದೆ ಬಡಿಯುವ ಕಾರ್ಯವನ್ನು ಇನ್ನಷ್ಟು ತೀವ್ರಗೊಳಿಸಿದೆ. ದೇಶದ ಇತರ ಭಾಗದಲ್ಲೂ ಪೊಲೀಸರು ಉಗ್ರರ ಚಲನವಲನದತ್ತ ಹೆಚ್ಚಿನ ನಿಗಾವಹಿಸಿದ್ದಾರೆ. ಶುಕ್ರವಾರ ಜೈಶೇ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಉತ್ತರಪ್ರದೇಶದ ದಿಯೋಬಂದ್ನಿಂದ ಬಂಧನಕ್ಕೊಳಪಡಿಸಲಾಗಿದೆ.
ಬಂಧಿತರನ್ನು ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಶಹನವಾಝ್ ತೆಲಿ ಮತ್ತು ಪುಲ್ವಾಮ ನಿವಾಸಿ ಅಖಿಬ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ. ಉತ್ತರಪ್ರದೇಶದ ಭಯೋತ್ಪಾದನಾ ವಿರೋಧಿ ತಂಡದ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಇವರನ್ನು ಬಂಧನಕ್ಕೊಳಪಡಿಸಿದ್ದಾರೆ.
ಯುವಕರನ್ನು ತಲೆಕೆಡಿಸಿ ಉಗ್ರ ಸಂಘಟನೆಗಳಿಗೆ ಸೇರಿಸಿಕೊಳ್ಳುವ ಕೆಲಸವನ್ನುಈ ಇಬ್ಬರು ಭಯೋತ್ಪಾದಕರಿಗೆ ನೀಡಲಾಗಿತ್ತು. ವಿವಿಧ ಕಾಲೇಜುಗಳಿಗೆ ದಾಖಲಾತಿ ಹೊಂದದೆಯೇ ಇವರುಗಳು ಹಾಜರಾಗುತ್ತಿದ್ದರು ಎನ್ನಲಾಗಿದೆ. 20-25 ವರ್ಷದೊಳಗಿನ ವಯಸ್ಸಿನವರಾದ ಈ ಶಂಕಿತ ಭಯೋತ್ಪಾದಕರಿಂದ ಎ23-ಬೋರ್ ವೆಪನ್, ಲೈವ್ ಕ್ಯಾಟ್ರಿಜಸ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪುಲ್ವಾಂ ದಾಳಿಯ ಮಾಸ್ಟರ್ ಮೈಂಡ್ ಕಮ್ರಾನ್ ಎಂಬಾತನನ್ನು ನೆಲಕ್ಕುರುಳಿಸಿದ ಬಳಿಕ ಈ ಇಬ್ಬರು ಭಯೋತ್ಪಾದಕರ ಬಂಧನವಾಗಿದ್ದು, ಉಗ್ರ ವಿರೋಧಿ ಹೋರಾಟದಲ್ಲಿ ಭಾರತಕ್ಕೆ ಇನ್ನಷ್ಟು ಬಲ ತಂದುಕೊಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.