ಅಮೃತಸರ: ಜಲಿಯನ್ ವಾಲಾಬಾಗ್ ನರಮೇಧ ನಡೆದು 100 ವರ್ಷಗಳು ಪೂರೈಸುತ್ತಿರುವ ಹಿನ್ನಲೆಯಲ್ಲಿ, ಅದರ ಸ್ಮರಣಾರ್ಥ ಅಮೃತಸರದಲ್ಲಿ ಸ್ಮಾರಕವೊಂದನ್ನು ನಿರ್ಮಾಣ ಮಾಡಲು ಪಂಜಾಬ್ ನಿರ್ಧರಿಸಿದೆ. ಈ ಸ್ಮಾರಕಕ್ಕೆ ಪಂಜಾಬ್ನ 13,000 ಹಳ್ಳಿಗಳ ಮಣ್ಣನ್ನು ಬಳಸಲು ತೀರ್ಮಾನಿಸಲಾಗಿದೆ.
ಈಗಾಗಲೇ ಸ್ಮಾರಕ ನಿರ್ಮಾಣಕ್ಕೆ ಬೇಕಾದ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, ಈ ಕಾರ್ಯಕ್ಕೆ ಗ್ರಾಮಗಳ ಸಹಕಾರವನ್ನು ಪಡೆಯುವ ನಿಟ್ಟಿನಲ್ಲಿ ಪಂಚಾಯತ್ಗಳಿಗೆ ಸೂಚನೆಯನ್ನು ನೀಡಲಾಗಿದೆ. ಅಮೃತಸರದ ಡೆಪ್ಯೂಟಿ ಕಮಿಷನರ್ಗೆ ಸ್ಮಾರಕ ನಿರ್ಮಾಣಕ್ಕೆ ಸ್ಥಳ ಗೊತ್ತುಪಡಿಸುವಂತೆ ಸೂಚಿಸಲಾಗಿದೆ. ಸ್ಮಾರಕದ ವಿನ್ಯಾಸವನ್ನು ಮಾಡುವ ಜವಾಬ್ದಾರಿಯನ್ನು ಆರ್ಟ್ಸ್ ಆಂಡ್ ಕಲ್ಚರಲ್ ಹೆರಿಟೇಜ್ ಟ್ರಸ್ಟ್ಗೆ ಒದಗಿಸಲು ನಿರ್ಧರಿಸಲಾಗಿದೆ.
ಇನ್ನು, ಜಲಿಯನ್ ವಾಲಾಬಾಗ್ ಹತ್ಯಾಕಾಂಡ ನಡೆದ ದಿನವಾದ ಎಪ್ರಿಲ್ 13 ರಂದು ದೊಡ್ಡದಾಗಿ ಸಾರ್ವಜನಿಕ ಸಮಾರಂಭವನ್ನು ನಡೆಸಲಾಗುತ್ತಿದ್ದು, ಅಪಾರ ಪ್ರಮಾಣದ ಜನರು ಹುತಾತ್ಮರಿಗೆ ನಮನವನ್ನು ಸಲ್ಲಿಕೆ ಮಾಡಲಿದ್ದಾರೆ.
ಪಂಜಾಬ್ನ ಪ್ರತಿ ಪಠ್ಯಪುಸ್ತಕದಲ್ಲೂ ಜಲಿಯನ್ ವಾಲಾಬಾಗ್ ಬಗೆಗಿನ ಮಾಹಿತಿ ಇರುವಂತೆ ನೋಡಿಕೊಳ್ಳಬೇಕು ಎಂದು ಅಲ್ಲಿನ ಸರ್ಕಾರ ಈಗಾಗಲೇ ಶಿಕ್ಷಣ ಇಲಾಖೆಗೆ ಆದೇಶ ನೀಡಿದೆ.
1919ರ ಎಪ್ರಿಲ್ 13ರಂದು ಅಮೃತಸರದ ಜಲಿಯನ್ ವಾಲಾಬಾಗ್ನಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದವರ ಮೇಲೆ ಬ್ರಿಟಿಷ್ ಕಮಾಂಡರ್ ಜನರಲ್ ಡಯರ್ ಏಕಾಏಕಿ ಗುಂಡಿನ ಮಳೆಗೆರೆಯಲು ಆದೇಶ ನೀಡಿದ್ದ, ಈ ವೇಳೆ ಅನೇಕ ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡು ಹುತಾತ್ಮರಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.