ಮುಂಬಯಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಬಿಜೆಪಿ-ಆರ್ಎಸ್ಎಸ್ ತಲೆಗೆ ಕಟ್ಟಲು ಪ್ರಯತ್ನಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿ ವಿರುದ್ಧ ಮುಂಬಯಿ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಆರ್ಎಸ್ಎಸ್ ಸ್ವಯಂಸೇವಕ ಧ್ರುತಿಮನ್ ಜೋಶಿ ಎಂಬುವವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ಮೇರೆಗೆ ಈ ಸಮನ್ಸ್ ಜಾರಿಗೊಳಿಸಲಾಗಿದೆ.
ಧ್ರುತಿಮನ್ ಅವರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿಯವರ ವಿರುದ್ಧ 2017ರಲ್ಲಿ ದೂರನ್ನು ದಾಖಲು ಮಾಡಿದ್ದರು. ಇದೀಗ ಮ್ಯಾಜಿಸ್ಟ್ರೇಟ್ ಪಿ.ಕೆ. ದೇಶಪಾಂಡೆ ಅವರು ರಾಹುಲ್ ಮತ್ತು ಯಚೂರಿಯವರ ವಿರುದ್ಧ ಸಮನ್ಸ್ ಜಾರಿಗೊಳಿಸಿದ್ದಾರೆ. ಆದರೆ ಸೋನಿಯಾ ಮತ್ತು ಸಿಪಿಐ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದ್ದಾರೆ. ಒಬ್ಬ ವ್ಯಕ್ತಿ ನೀಡಿದ ಹೇಳಿಕೆಗೆ ಪಕ್ಷ ಜವಾಬ್ದಾರವಾಗುದಿಲ್ಲ ಎಂದು ಅವರು ಅಭಿಪ್ರಾಯಿಸಿದ್ದಾರೆ. ಈ ಪ್ರಕರಣದ ಬಗೆಗಿನ ಮುಂದಿನ ವಿಚಾರಣೆ ಮಾರ್ಚ್.25ರಂದು ಜರುಗಲಿದೆ.
2017ರ ಸೆಪ್ಟಂಬರ್ನಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿತ್ತು. ಹತ್ಯೆಯ ಬಳಿಕ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಯವರು, ಈ ಹತ್ಯೆಯ ಹಿಂದೆ ಬಿಜೆಪಿ-ಆರ್ಎಸ್ಎಸ್ ಕೈವಾಡವಿದೆ ಎಂದಿದ್ದರು. ಆರ್ಎಸ್ಎಸ್-ಬಿಜೆಪಿ ವಿರುದ್ಧ ಮಾತನಾಡುವವರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಬೇಜವಾಬ್ದಾರಿಯ ಹೇಳಿಕೆಯನ್ನು ನೀಡಿದ್ದರು. ಯಚೂರಿಯವರೂ, ಆರ್ಎಸ್ಎಸ್ ಜನರೇ ಹತ್ಯೆ ಮಾಡಿದ್ದಾರೆ ಎಂದಿದ್ದರು. ಇವರ ಹೇಳಿಕೆಗಳಿಗೆ ಭಾರೀ ಖಂಡನೆಗಳು ವ್ಯಕ್ತವಾಗಿದ್ದವು.
ರಾಹುಲ್ ಅವರು ಆರ್ಎಸ್ಎಸ್ ವಿರುದ್ಧ ಮಾತನಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಅನೇಕ ಬಾರಿ ಅವರು ಆರ್ಎಸ್ಎಸ್ನ್ನು ಅವರು ಟಾರ್ಗೆಟ್ ಮಾಡಿದ್ದಾರೆ. ಗೋಡ್ಸೆಯನ್ನು ಕೊಂದಿದ್ದು ಆರ್ಎಸ್ಎಸ್ ಎಂದು ಹೇಳಿ ವಿವಾದವನ್ನೂ ಸೃಷ್ಟಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.