ಜೈಪುರ: ಈ ದೇಶದ ಮಣ್ಣಿನ ಮೇಲಾಣೆ, ಈ ದೇಶವನ್ನು ನಾನು ನಾಶವಾಗಲು ಬಿಡುವುದಿಲ್ಲ, ಈ ದೇಶವನ್ನು ನಾನು ತಲೆ ತಗ್ಗಿಸಲು ಬಿಡುವುದಿಲ್ಲ. ಭಾರತಮಾತೆ ತಲೆ ತಗ್ಗಿಸಲು ಬಿಡುವುದಿಲ್ಲ, ಭಾರತಕ್ಕೆ ಹಿನ್ನಡೆಯಾಗಲು ಬಿಡುವುದಿಲ್ಲ, ದೇಶ ಒಡೆಯಲು ಬಿಡುವುದಿಲ್ಲ, ದೇಶಕ್ಕಿಂತ ದೊಡ್ಡದು ಏನೂ ಇಲ್ಲ. ದೇಶದ ನಿರ್ಮಾಣದಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬ ವ್ಯಕ್ತಿಗೂ ಈ ಪ್ರಧಾನ ಸೇವಕನ ನಮನ. ಈ ದೇಶ ಸುರಕ್ಷಿತವಾದ ಕೈಗಳಲ್ಲಿ ಇದೆ ಎಂಬ ಭರವಸೆಯನ್ನು ದೇಶವಾಸಿಗಳಿಗೆ ನಾವು ನೀಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ರಾಜಸ್ಥಾನದ ಚುರುವಿನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಈ ದೇಶದ ಮಣ್ಣಿನ ಮೇಲಾಣೆ, ಈ ದೇಶವನ್ನು ನಾನು ನಾಶವಾಗಲು ಬಿಡುವುದಿಲ್ಲ, ಈ ದೇಶವನ್ನು ನಾನು ತಲೆ ತಗ್ಗಿಸಲು ಬಿಡುವುದಿಲ್ಲ. ಭಾರತ ಮಾತೆ ತಲೆ ತಗ್ಗಿಸುವಂತೆ ಮಾಡುವುದಿಲ್ಲ, ಆಕೆ ಗೌರವ ಕಳೆದುಕೊಳ್ಳುವಂತೆ ನಾನು ಮಾಡುವುದಿಲ್ಲ ಎಂದು ನಾನು ಆಕೆಗೆ ಮಾತು ಕೊಡುತ್ತೇನೆ’ ಎಂದಿದ್ದಾರೆ. ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ತತ್ವದೊಂದಿಗೆ ಮುನ್ನಡೆಯುತ್ತಿದ್ದೇವೆ ಎಂದು ಹೇಳುವ ಮೂಲಕ ಸೈನಿಕರು, ರೈತರು ಮತ್ತು ವಿಜ್ಞಾನಿಗಳು ನಮ್ಮ ದೇಶದ ಬೆನ್ನೆಲುಬು ಎಂದಿದ್ದಾರೆ.
ಭಾರತೀಯ ವಾಯುಸೇನೆ ಇಂದು ಮುಸುಕಿನ ಜಾವ ಪಾಕಿಸ್ಥಾನ ಗಡಿಯೊಳಗಿನ ಬಲಾಕೋಟ್ಗೆ ನುಗ್ಗಿ ವೈಮಾನಿಕ ದಾಳಿಯನ್ನು ನಡೆಸಿ ಸುಮಾರು 300 ಉಗ್ರರನ್ನು ಹತ್ಯೆ ಮಾಡಿದೆ. ಈ ಘಟನೆ ಇಡೀ ದೇಶವನ್ನೇ ಹೆಮ್ಮೆ ಪಡುವಂತೆ ಮಾಡಿದೆ. ಈ ಬಗ್ಗೆ ಮೋದಿಯವರ ಪ್ರತಿಕ್ರಿಯೆಗಾಗಿ ಇಡೀ ದೇಶವೇ ಎದುರು ನೋಡುತ್ತಿತ್ತು.
ಅದರಂತೆ ರಾಜಸ್ಥಾನದಲ್ಲಿ ಮಾತನಾಡಿದ ಅವರು, ಈ ದೇಶ ಸುರಕ್ಷಿತವಾದ ಕೈಗಳಲ್ಲಿ ಇದೆ ಎಂದರು. ವೀರ ಯೋಧರ, ಅವರ ಕುಟುಂಬದವರ ತ್ಯಾಗವನ್ನು ಸ್ಮರಿಸಿದರು.
ದೇಶಕ್ಕಿಂತ ಮಿಗಿಲು ಯಾವುದೂ ಇಲ್ಲ, ದೇಶ ತಲೆತಗ್ಗಿಸಲು ಬಿಡುವುದಿಲ್ಲ ಎಂದು 2014 ರಲ್ಲಿ ಇದೇ ಚುರುವಿನಲ್ಲಿ ನನ್ನ ಮನದಾಳದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ. 2014 ರ ದಿನವನ್ನು ಮತ್ತೆ ನೆನಪಿಸಿಕೊಳ್ಳುತ್ತಿದ್ದೇನೆ, ದೇಶ ಸುರಕ್ಷಿತವಾದ ಕೈಗಳಲ್ಲಿದೆ ಎಂಬ ಭರವಸೆ ನೀಡುತ್ತೇನೆ. ದೇಶ ತಲೆತಗ್ಗಿಸಲು ಬಿಡುವುದಿಲ್ಲ ಎಂದಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ 70 ವರ್ಷಗಳ ತರುವಾಯ ಯೋಧರಿಗೆ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಸಮರ್ಪಣೆ ಮಾಡಿದ್ದೇವೆ. ನಮ್ಮ ಸರ್ಕಾರ 20 ಲಕ್ಷಕ್ಕಿಂತ ಅಧಿಕ ಯೋಧರ ಕುಟುಂಬಗಳಿಗೆ ಒನ್ ರ್ಯಾಂಕ್ ಒನ್ ಪೆನ್ಶನ್ ಯೋಜನೆಯ ಲಾಭ ದೊರಕುವಂತೆ ಮಾಡಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.