ಮುಂಬಯಿ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಭಾರತೀಯ ಯೋಧರಿಗೆ ರೂ.1 ಕೋಟಿ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅವರ ತಂದೆ ದೀನಾನಾಥ್ ಮಂಗೇಶ್ಕರ್ ಅವರ ಪುಣ್ಯತಿಥಿಯಾದ ಎ.24ರಂದು ಈ ಹಣವನ್ನು ಅವರು ಸೇನೆಗೆ ಹಸ್ತಾಂತರ ಮಾಡಲಿದ್ದಾರೆ.
ಫೆ.14ರಂದು ಪುಲ್ವಾಮದಲ್ಲಿ ಜೈಶೇ ಉಗ್ರರು ಭಯೋತ್ಪಾದನಾ ದಾಳಿಯನ್ನು ನಡೆಸಿ 40 ಸಿಆರ್ಪಿಎಫ್ ಯೋಧರನ್ನು ಹತ್ಯೆ ಮಾಡಿದ್ದರು. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನಾನಾ ಮೂಲೆಯ ಜನರು ಮುಂದೆ ಬಂದು ಹುತಾತ್ಮ ಯೋಧರ ಕುಟುಂಬಗಳಿಗೆ ಧನ ಸಹಾಯವನ್ನು ಮಾಡಿದ್ದಾರೆ.
ಲತಾ ಮಂಗೇಶ್ಕರ್ ಅವರೂ ಈ ಘಟನೆಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದರು. ಅಲ್ಲದೇ ಧನ ಸಹಾಯವನ್ನು ಘೋಷಣೆ ಮಾಡಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ದೇಶಕ್ಕಾಗಿ ಪ್ರಾಣತ್ಯಾಗ ಮಾಡುವ ಯೋಧರಿಗೆ ನಮ್ಮ ಇಂಡಸ್ಟ್ರೀಯ ಜನರು ಸದಾ ಸಹಾಯ ಮಾಡುತ್ತಾರೆ. ಈಗಲೂ ಹಲವಾರು ಮಂದಿ ಧನ ಸಹಾಯ ಮಾಡಿದ್ದಾರೆ. ನಾವು ಕೂಡ ಒಂದಿಷ್ಟು ಮೊತ್ತವನ್ನು ನೀಡುತ್ತಿದ್ದೇವೆ’ ಎಂದಿದ್ದಾರೆ.
ಸೈನಿಕರ ಪರ ಅಪಾರ ಗೌರವವನ್ನು ಹೊಂದಿರುವ ಲತಾ ಮಂಗೇಶ್ಕರ್ ಅವರು, ತಮ್ಮ ಜನ್ಮದಿನಕ್ಕೆ ಗ್ರೀಟಿಂಗ್ಸ್ ಕಾರ್ಡ್ ಇತ್ಯಾದಿಗಳನ್ನು ಕಳುಹಿಸುವ ಬದಲು ಆ ಹಣವನ್ನು ಸೈನಿಕರಿಗಾಗಿ ವ್ಯಯಿಸಿ ಎಂದು ಮನವಿ ಮಾಡಿಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.