ನವದೆಹಲಿ: ಭಾರತ-ಪಾಕಿಸ್ಥಾನದ ಗಡಿಯಲ್ಲಿ ಉಭಯ ದೇಶಗಳ ನಡುವಣ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನಲೆಯಲ್ಲಿ ವಿಚಲಿತಗೊಂಡಿರುವ ಪಾಕಿಸ್ಥಾನ, ಭಾರತವನ್ನು ಮಾತುಕತೆಗೆ ಆಹ್ವಾನಿಸಿದೆ. ನಾವು ಯುದ್ಧವನ್ನು ಬಯಸುವುದಿಲ್ಲ, ಶಾಂತಿ ಬಯಸುತ್ತೇವೆ ಎಂದಿದೆ.
ಪಾಕಿಸ್ಥಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಆಸೀಫ್ ಗಫೂರ್ ಅವರು ಭಾರತವನ್ನು ಶಾಂತಿ ಮಾತುಕತೆ ಆಹ್ವಾನಿಸಿದ್ದಾರೆ. ‘ನಿಮಗೆ ಶಾಂತಿ ಬೇಕಿದ್ದರೆ ಮಾತುಕತೆಗೆ ಬನ್ನಿ. ಯುದ್ಧದಿಂದ ಯಾವುದೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಸಾಧ್ಯವಿಲ್ಲ. ಭಾರತ ನಮ್ಮ ಈ ಆಫರ್ನ್ನು ಶಾಂತ ಮನಸ್ಸಿನಿಂದ ಯೋಚಿಸಬೇಕು’ ಎಂದಿದ್ದಾರೆ.
‘ಪಾಕಿಸ್ಥಾನ ಯುದ್ಧ ನಡೆಸಲು ಬಯಸುವುದಿಲ್ಲ, ನಮ್ಮ ಸಂದೇಶ ಶಾಂತಿ. ಅಂತಾರಾಷ್ಟ್ರೀಯ ಸಮುದಾಯ ಕೂಡ ಇದರಲ್ಲಿ ಪಾತ್ರ ವಹಿಸಬೇಕು’ ಎಂದಿದ್ದಾರೆ.
ಭಾರತದ ವೈಮಾನಿಕ ದಾಳಿಗೆ ಪ್ರತ್ಯುತ್ತರ ಎಂಬಂತೆ ಇಂದು ಭಾರತದ ಗಡಿಯೊಳಗೆ ನುಸುಳಿದ್ದ ಪಾಕಿಸ್ಥಾನದ ವಿಮಾನಗಳನ್ನು ಭಾರತ ಹಿಮ್ಮೆಟ್ಟಿಸಿದೆ. ಮಾತ್ರವಲ್ಲ, ಎಫ್-16 ವಿಮಾನವನ್ನು ಹೊಡೆದುರುಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.