ವಿಶ್ವಸಂಸ್ಥೆ: ಜೈಶೇ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಝರ್ನನ್ನು ಜಾಗತಿಕ ಭಯೋತ್ಪಾದಕ ಎಂದು ಷೋಷಿಸುವಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಅಮೆರಿಕಾ, ಬ್ರಿಟನ್, ಫ್ರಾನ್ಸ್ ದೇಶಗಳು ಪ್ರಸ್ತಾಪ ಸಲ್ಲಿಸಲು ನಿರ್ಧರಿಸಿದೆ. ಇದು ಭಯೋತ್ಪಾದನಾ ವಿರೋಧಿ ಹೋರಾಟದಲ್ಲಿ ಭಾರತಕ್ಕೆ ಸಿಕ್ಕ ಮಹತ್ತರವಾದ ಜಯ ಎಂದೇ ಬಣ್ಣಿಸಲಾಗಿದೆ.
ಆದರೆ ಚೀನಾ ಎಂದಿನಂತೆ ಈ ಬಾರಿಯೂ ಇದಕ್ಕೆ ವಿರೋಧ ವ್ಯಕ್ತಪಡಿಸುವ ನಿರೀಕ್ಷೆ ಇದೆ, 2016 ಮತ್ತು 2017ರಲ್ಲೂ ಮಸೂದ್ ಅಝರ್ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವ ಪ್ರಸ್ತಾಪವನ್ನು ಇದು ನಿರಾಕರಿಸಿತ್ತು. ಆದರೀಗ ಹೊಸದಾಗಿ ಪ್ರಸ್ತಾಪ ಸಲ್ಲಿಕೆಗೆ ಮುಂದಾಗಿರುವ ಬಗ್ಗೆ ಚೀನಾ ಇದುವರೆಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
ಮೂರು ರಾಷ್ಟ್ರಗಳ ಈ ಹೊಸ ಪ್ರಸ್ತಾಪವನ್ನು ಪರಿಗಣಿಸಲು ಭದ್ರತಾ ಮಂಡಳಿ ಹತ್ತು ಕೆಲಸದ ದಿನಗಳ ಗಡುವನ್ನು ತೆಗೆದುಕೊಳ್ಳಲಿದೆ. ಕಳೆದ 10 ವರ್ಷಗಳಲ್ಲಿ ಆಝರ್ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ವಿಶ್ವಸಂಸ್ಥೆಯಲ್ಲಿ ನಡೆಯುತ್ತಿರುವ ನಾಲ್ಕನೇ ಪ್ರಯತ್ನ ಇದಾಗಿದೆ. ಉಗ್ರ ಮಸೂದ್ ಆಝರ್ನನ್ನು ಕಪ್ಪು ಪಟ್ಟಿಗೆ ಸೇರಿಸಬೇಕು, ಜೈಶೇ ಇ ಮೊಹಮ್ಮದ್ ಹಾಗೂ ಮಸೂದ್ಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎನ್ನುವ ಕುರಿತು ಪ್ರಸ್ತಾಪ ಸಲ್ಲಿಕೆಯಾಗಲಿದೆ.
ಫೆ.14ರಂದು ಪುಲ್ವಾಮದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ಥಾನದ ನಡುವಣ ಸಂಬಂಧ ತೀವ್ರವಾಗಿ ಹಳಸಿದ್ದು, ಸದ್ಯಕ್ಕೆ ತಿಳಿಗೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ. ಜೈಶೇ ಮೊಹಮ್ಮದ್ ಸಂಘಟನೆಯನ್ನು ಪೋಷಿಸುತ್ತಿರುವ ಪಾಕ್ಗೆ ತಕ್ಕ ಪಾಠವನ್ನು ಕಲಿಸಲು ಭಾರತ ಸರ್ವ ರೀತಿಯಲ್ಲೂ ಸನ್ನದ್ಧವಾಗಿದೆ ನಿಂತಿದೆ.
ಪುಲ್ವಾಮ ದಾಳಿಯಲ್ಲಿ ಜೈಶೇ ಸಂಘಟನೆಯ ಕೈವಾಡವನ್ನು ಉಲ್ಲೇಖಿಸಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಂಡನೆಯನ್ನು ವ್ಯಕ್ತಪಡಿಸಿತ್ತು, ಇದು ಭಾರತಕ್ಕೆ ಸಿಕ್ಕ ಜಯವಾಗಿತ್ತು, ಚೀನಾಗೆ ಮುಖಭಂಗವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.