ನವದೆಹಲಿ: ಭಾರತ ಮತ್ತು ಪಾಕಿಸ್ಥಾನದ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿರುವ ಹಿನ್ನಲೆಯಲ್ಲಿ ಬುಧವಾರ ಮಹತ್ವದ ಸಭೆಯನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು, ಮೂರು ಸೇನಾ ಪಡೆಗಳಿಗೂ ಸಂಪೂರ್ಣ ಸ್ವತಂತ್ರವನ್ನು ನೀಡಿದ್ದಾರೆ.
ಪ್ರಧಾನಿಯವರು ಶಸ್ತ್ರಾಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮತ್ತು ಉನ್ನತ ಅಧಿಕಾರಿಗಳೊಂದಿಗೆ ನಿರಂತರ ಸಭೆಗಳನ್ನು ನಡೆಸಿ ಗಡಿಯಲ್ಲಿನ ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಭೂಸೇನೆ, ವಾಯುಸೇನೆ, ನೌಕಾಸೇನೆಯ ಮುಖ್ಯಸ್ಥರುಗಳು ಮೋದಿಯವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದು, ಪಾಕಿಸ್ಥಾನದ ವಾಯುಸೇನೆ ಭಾರತೀಯ ವಾಯು ವಲಯವನ್ನು ಅತಿಕ್ರಮಣ ಮಾಡಿದ ಮತ್ತು ಪೈಲೆಟ್ನನ್ನು ಹಿಡಿದಿಟ್ಟುಕೊಂಡ ಬಗೆಗಿನ ಭದ್ರತಾ ಪರಿಸ್ಥಿತಿಗಳ ಬಗ್ಗೆ ವಿವರಿಸಿದರು. 24 ಗಂಟೆಗಳಲ್ಲಿ ಎರಡು ಬಾರಿ ಸಭೆಯನ್ನು ನಡೆಸಲಾಗಿದೆ.
ಭಾರತ-ಪಾಕಿಸ್ಥಾನ ಗಡಿಯಲ್ಲಿ ಪರಿಸ್ಥಿತಿ ಬಿಗಾಡಿಸಿರುವ ಹಿನ್ನಲೆಯಲ್ಲಿ ಗಡಿ ಪ್ರದೇಶದುದ್ದಕ್ಕೂ ಹೈಅಲರ್ಟ್ನ್ನು ಘೋಷಣೆ ಮಾಡಲಾಗಿದೆ, ಅಷ್ಟೇ ಅಲ್ಲದೇ, ದೇಶದ ಪ್ರಮುಖ ನಗರಗಳಲ್ಲೂ ಪೊಲೀಸರು ಮತ್ತು ಪ್ಯಾರಾಮಿಲಿಟರಿ ಪಡೆಗಳು ಕಟ್ಟೆಚ್ಚರವನ್ನು ವಹಿಸಿವೆ.
ಬುಧವಾರ ನಡೆದ ತ್ವರಿತ ಬೆಳವಣಿಗೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ಪರಸ್ಪರರ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿವೆ. ಭಾರತೀಯ ವಾಯುವಲಯವನ್ನು ಅತಿಕ್ರಮಣ ಮಾಡಲು ಯತ್ನಿಸಿದ ಪಾಕಿಸ್ಥಾನದ ಯುದ್ಧ ವಿಮಾನಗಳನ್ನು ಭಾರತೀಯರು ಹಿಮ್ಮೆಟ್ಟಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.