ನವದೆಹಲಿ: ಭಾರತದ ವೈಮಾನಿಕ ದಾಳಿಗೆ ವಿಚಲಿತಗೊಂಡಿರುವ ಪಾಕಿಸ್ಥಾನ ಎಷ್ಟು ಹೀನ ಮಟ್ಟಕ್ಕೆ ಇಳಿಯಬೇಕೋ ಅಷ್ಟು ಹೀನ ಮಟ್ಟಕ್ಕೆ ಇಳಿದಿದೆ. ಈಗ ಅದು, ಭಾರತ-ಪಾಕಿಸ್ಥಾನ ಗಡಿಯಲ್ಲಿನ ಜನರಿಗೆ ಭಾರತೀಯ ಯೋಧರ ಚಲನವಲನಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಮನವಿ ಮಾಡಿಕೊಳ್ಳುತ್ತಿದೆ.
ಪತ್ರಿಕಾ ಎಂಬ ಸುದ್ದಿ ಮಾಧ್ಯಮದ ಪ್ರಕಾರ, ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ಶ್ರೀರಂಗನಗರ ಜಿಲ್ಲೆಯಲ್ಲಿ ನೆಲೆಸಿರುವ ಜನರು 13 ಡಿಜಿಟ್ ನಂಬರ್ನಿಂದ ಫೋನ್ ಕರೆಗಳನ್ನು ಪಡೆಯುತ್ತಿದ್ದಾರೆ. ಈ ಕರೆಗಳನ್ನು ಇಂಟರ್ನೆಟ್ ಮೂಲಕ ಮಾಡಲಾಗುತ್ತಿದೆ ಎನ್ನಲಾಗಿದೆ. ಭಾರತೀಯ ಸೈನಿಕರು ಇರುವ ಸ್ಥಳ ಸೇರಿದಂತೆ ಸೇನೆಗೆ ಸಂಬಂಧಿಸಿದ ಮಹತ್ವದ ಮಾಹಿತಿಗಳನ್ನು ನೀಡುವಂತೆ ಇವರಿಗೆ ಮನವಿ ಮಾಡಲಾಗುತ್ತಿದೆ ಎನ್ನಲಾಗಿದೆ.
ಶ್ರೀರಂಗನಗರ ಗ್ರಾಮದ ಪಂಚಾಯತ್ ಮುಖ್ಯಸ್ಥ ರಾಕೇಶ್ ಬಿಷ್ಣೋಯ್ ಅವರಿಗೂ ಇದೇ ರೀತಿಯ ಕರೆ ಬಂದಿದೆ. ಅವರು ನೀಡಿದ ಮಾಹಿತಿಯ ಪ್ರಕಾರ, ಬೆಳಿಗ್ಗೆ 10.30ರ ಸುಮಾರು 13 ಡಿಜಿಟ್ ನಂಬರ್ನಿಂದ ಕರೆ ಬಂದಿದೆ. ಕರೆ ಮಾಡಿದವರು ಗಡಿಯಲ್ಲಿ ಭಾರತೀಯ ಸೈನಿಕರು ಎಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಆ ಪ್ರದೇಶದಲ್ಲಿ ಎಷ್ಟು ಹೊತ್ತಿನವರೆಗೆ ಅವರು ಇರುತ್ತಾರೆ, ಅವರ ಚಲನ ವಲನ ಹೇಗಿರುತ್ತದೆ ಎಂಬಿತ್ಯಾದಿ ಮಾಹಿತಿಗಳನ್ನು ಕೇಳಿದ್ದಾನೆ.
ಆದರೆ ಬಿಷ್ಣೋಯ್ ಅವರು, ಈ ಎಲ್ಲಾ ಮಾಹಿತಿಗಾಗಿ ಪೊಲೀಸರನ್ನು ಸಂಪರ್ಕಿಸಿ ನಮಗೆ ಗೊತ್ತಿಲ್ಲ ಎಂದು ಉತ್ತರಿಸಿದ್ದಾರೆ. +3444172258965 ಈ ನಂಬರ್ನಿಂದ ಕರೆ ಬಂದಿದ್ದು, 2 ನಿಮಿಷ 24 ಸೆಕೆಂಡುಗಳ ಕಾಲ ಆತ ಮಾತನಾಡಿದ್ದಾನೆ ಎಂದಿದ್ದಾರೆ.
ಈ ಬಗ್ಗೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಅಲ್ಲದೇ ಸ್ಥಳಿಯರಿಗೆ ಸೇನೆಯ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಬಾರದು ಎಂದು ಆದೇಶಿಸಿದ್ದಾರೆ.
ಪ್ರಸ್ತುತ ಭಾರತ ಮತ್ತು ಪಾಕಿಸ್ಥಾನದ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ರಾಜಸ್ಥಾನ, ಪಂಜಾಬ್, ಜಮ್ಮು ಕಾಶ್ಮೀರದ ಗಡಿಗಳಲ್ಲಿ ತೀವ್ರ ಕಟ್ಟೆಚ್ಚರವನ್ನು ವಹಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.