ನವದೆಹಲಿ: ಉಗ್ರ ವಿರೋಧಿ ಹೋರಾಟದಲ್ಲಿ ದಿಟ್ಟ ಹೆಜ್ಜೆಯನ್ನು ಮುಂದಿಟ್ಟಿರುವ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರ ಮೂಲದ ಜಮಾತ್-ಇ-ಇಸ್ಲಾಮಿ ಸಂಘಟನೆಯನ್ನು ನಿಷೇಧಿಸಲು ಅಧಿಸೂಚನೆಯನ್ನು ಹೊರಡಿಸಿದೆ. ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯ ಸೆಕ್ಷನ್ 3ರಡಿ ಕಾನೂನುಬಾಹಿರ ಸಂಪರ್ಕಗಳನ್ನು ಹೊಂದಿದ ಆರೋಪದ ಮೇರೆಗೆ ಈ ನಿಷೇಧವನ್ನು ಹೇರಲಾಗುತ್ತಿದೆ.
ಈ ಸಂಘಟನೆಗೆ ಸೇರಿದ ಹಲವಾರು ನಾಯಕರ ಮೇಲೆ ಕಳೆದ ವಾರ ರಾಷ್ಟ್ರೀಯ ತನಿಖಾ ದಳ ದಾಳಿಯನ್ನು ನಡೆಸಿತ್ತು, ಸುಮಾರು 30 ಮಂದಿಯನ್ನು ಬಂಧನಕ್ಕೊಳಪಡಿಸಿತ್ತು.
ಜಮಾತ್-ಇ-ಇಸ್ಲಾಮಿ ಸಂಘಟನೆಯ ಮುಖ್ಯಸ್ಥ ಡಾ. ಅಬ್ದುಲ್ ಹಮೀದ್ ಫಯಾಝ್, ವಕೀಲ ಝಹೀದ್ ಅಲಿ, ಗುಲಾಂ ಖಾದಿರ್, ಅಬ್ದುರ್ ರಾವೂಫ್, ಮುದಸಿರ್ ಅಹ್ಮದ್ ಮುಂತಾದ ನಾಯಕರು ಬಂಧನಕ್ಕೊಳಗಾಗಿದ್ದಾರೆ. ಇವರನ್ನು ಕಾಶ್ಮೀರ ಕಣಿವೆಯ ಅನಂತ್ನಾಗ್, ಪಹಲ್ಗಂ, ದಿಯಾಲ್ಗಂಗಳಿಂದ ವಶಕ್ಕೆ ಪಡೆಯಲಾಗಿದೆ.
ಈ ಸಂಘಟನೆ ಉಗ್ರ ಸಂಘಟನೆಗಳೊಂದಿಗೆ ನೇರವಾದ ಸಂಪರ್ಕವನ್ನು ಹೊಂದಿದ್ದು, ಕಣಿವೆಯಲ್ಲಿ ಹಿಂಸಾಚಾರ, ಭಾರತ ವಿರೋಧಿ ಚಟುವಟಿಕೆಗಳಿಗೆ ಇಂಬು ನೀಡುತ್ತಿದೆ ಎಂದು ತನಿಖಾ ದಳ ಆರೋಪಿಸಿದೆ.
ಈ ಸಂಘಟನೆಯ ನಿಷೇಧದಿಂದ ಕಣಿವೆಯಲ್ಲಿ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುವವರಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ನಿರೀಕ್ಷಿಸಲಾಗಿದೆ.
ಪುಲ್ವಾಮ ದಾಳಿ ಮತ್ತು ಅದರ ಬಳಿಕ ನಡೆದ ಬೆಳವಣಿಗೆಗಳ ಹಿನ್ನಲೆಯಲ್ಲಿ ಜಮಾತ್ ಇ ಇಸ್ಲಾಮಿ ಸಂಘಟನೆಯ ನಿಷೇಧ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.