ನವದೆಹಲಿ: ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗೌರವ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ ಎಂಬ ಕಾರಣಕ್ಕೆ, ಪಾಕಿಸ್ಥಾನಬವು ಆರ್ಗನೈಝೇಶನ್ ಆಫ್ ಇಸ್ಲಾಮಿಕ್ ಕೊಅಪರೇಶನ್(ಓಐಸಿ) ಸಭೆಯನ್ನು ಬಹಿಷ್ಕರಿಸಿದೆ. ಅಬುಧಾಬಿಯಲ್ಲಿ ಈ ಸಭೆ ನಡೆಯುತ್ತಿದ್ದು, 57 ದೇಶಗಳ ವಿದೇಶಾಂಗ ಸಚಿವರುಗಳು ಇದಲ್ಲಿ ಭಾಗಿಯಾಗುತ್ತಿದ್ದಾರೆ.
ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಗೌರವ ಅತಿಥಿಯಾಗಿ ಆಹ್ವಾನ ನೀಡುವುದನ್ನು ವಿರೋಧಿಸಿ ಸಭೆಯಲ್ಲಿ ಭಾಗಿಯಾಗದಿರಲು ನಿರ್ಧರಿಸಿರುವುದಾಗಿ ಪಾಕಿಸ್ಥಾನದ ವಿದೇಶಾಂಗ ಸಚಿವೆ ಶಾ ಮೆಹಮೂದ್ ಖುರೇಷಿ ಇಸ್ಲಾಮಾಬಾದ್ನ ಜಂಟಿ ಅಧಿವೇಶನದಲ್ಲಿ ಹೇಳಿದ್ದಾರೆ.
ಇಂದಿನಿಂದ ಎರಡು ದಿನಗಳ ಕಾಲ ಈ ಸಭೆ ಜರುಗುತ್ತಿದ್ದು, ಇದರಲ್ಲಿ ಭಾಗಿಯಾಗಲು ಸುಷ್ಮಾ ಈಗಾಗಲೇ ಅಭಿದಾಬಿಗೆ ತೆರಳಿದ್ದಾರೆ. ಇದೇ ಮೊದಲ ಬಾರಿಗೆ ಆರ್ಗನೈಝೇಶನ್ ಆಫ್ ಇಸ್ಲಾಮಿಕ್ ಕೊಅಪರೇಶನ್ನ ಸಭೆಯಲ್ಲಿ ಗೌರವ ಅತಿಥಿಯಾಗಿ ಭಾರತ ಭಾಗಿಯಾಗುತ್ತಿದೆ.
ಅಂತಾರಾಷ್ಟ್ರೀಯ ಶಾಂತಿ ಮತ್ತು ಸಹಕಾರ ವೃದ್ಧಿಸಲು ಇಸ್ಲಾಮಿಕ್ ಜಗತ್ತಿನ ಹಿತಾಸಕ್ತಿಗಳ ರಕ್ಷಣೆಯ ಮುಖ್ಯ ಉದ್ದೇಶದೊಂದಿಗೆ ಆರ್ಗನೈಝೇಶನ್ ಆಫ್ ಇಸ್ಲಾಮಿಕ್ ಕೊಅಪರೇಶನ್ನನ್ನು ಸ್ಥಾಪನೆ ಮಾಡಲಾಗಿದೆ. ಇದರಲ್ಲಿ ಭಾರತ ಸದಸ್ಯ ರಾಷ್ಟ್ರನಲ್ಲ, ಆದರೆ ಗೌರವ ಅತಿಥಿಯಾಗಿ ಭಾಗಿಯಾಗುತ್ತಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ಶೇಖ್ ಅಬ್ದುಲ್ಲಾ ಬಿನ್ ಝೈಯದ್ ಅವರು ಈ ಸಭೆಯಲ್ಲಿ ಗೌರವ ಅತಿಥಿಯಾಗಿ ಭಾಗಿಯಾಗುವಂತೆ ಭಾರತಕ್ಕೆ ಆಹ್ವಾನ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.