ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ನಲ್ಲಿ ಮಂಗಳವಾರ ಭದ್ರತಾ ಪಡೆಗಳು ಇಬ್ಬರು ಉಗ್ರಗಾಮಿಗಳನ್ನು ಹತ್ಯೆ ಮಾಡಿದೆ. ಪ್ರಸ್ತುತ ಕಾರ್ಯಾಚರಣೆ ಆ ಭಾಗದಲ್ಲಿ ಮುಂದುವರೆದಿದೆ.
ಶ್ರೀನಗರದಿಂದ 46 ಕಿಲೋಮೀಟರ್ ದೂರದಲ್ಲಿರುವ ತ್ರಾಲ್ನಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಸೋಮವಾರದಿಂದ ಅಲ್ಲಿ ಎನ್ಕೌಂಟರ್ ನಡೆಸುತ್ತಿದೆ. ಈ ಭಾಗದಲ್ಲಿ ಇಂಟರ್ನೆಟ್ ಸೇವೆಯನ್ನೂ ಸ್ಥಗಿತಗೊಳಿಸಿದೆ.
ಫೆ.14ರಂದು ಜೈಶೇ ಇ ಮೊಹಮ್ಮದ್ ಸಂಘಟನೆಯ ಉಗ್ರ ಆತ್ಮಾಹುತಿ ದಾಳಿ ನಡೆಸಿ 44 ಸಿಆರ್ಪಿಎಫ್ ಯೋಧರನ್ನು ಹತ್ಯೆ ಮಾಡಿದ ಬಳಿಕ ಪುಲ್ವಾಮದಲ್ಲಿ ಹೈ ಅಲರ್ಟ್ನ್ನು ಹಾಕಲಾಗಿದೆ.
ಕಳೆದ ವಾರ, ಉತ್ತರ ಕಾಶ್ಮೀರದ ಹಂಡ್ವಾರದಲ್ಲಿ ಭದ್ರತಾ ಪಡೆಗಳು ಮೂರು ದಿನಗಳ ಕಾಲ ಗುಂಡಿನ ಚಕಮಕಿಯನ್ನು ನಡೆಸಿ ಇಬ್ಬರು ಉಗ್ರರನ್ನು ಭಾನುವಾರ ಹತ್ಯೆ ಮಾಡಿತ್ತು.
ಉಗ್ರರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆದ ಬಳಿಕ ಉಗ್ರರು ಹತಾಶರಾಗಿ ಭಾರತದ ವಿರುದ್ಧ ಮತ್ತಷ್ಟು ದಾಳಿಗಳನ್ನು ನಡೆಸಲು ಹವಣಿಸುತ್ತಿದ್ದಾರೆ. ಇದೇ ಕಾರಣಕ್ಕೆ ಪಾಕ್ ಮಿಲಿಟರಿ ಸಹಾಯ ಪಡೆದುಕೊಂಡು ಗಡಿಯಲ್ಲಿ ಉಪಟಳವನ್ನು ಹೆಚ್ಚುಗೊಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.