ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ವೈಯಕ್ತಿಕ ಉಳಿತಾಯದಿಂದ 21 ಲಕ್ಷ ರೂಪಾಯಿಗಳನ್ನು ಕುಂಭಮೇಳದ ಸ್ವಚ್ಛತಾ ಕಾರ್ಮಿಕರ ಕಲ್ಯಾಣಕ್ಕಾಗಿ ಕೊಡುಗೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಕುಂಭಮೇಳದಲ್ಲಿ ಸ್ವಚ್ಛತಾ ಕಾರ್ಮಿಕರ ಪಾದವನ್ನು ತೊಳೆಯುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ಮಾತ್ರವಲ್ಲದೇ ಸ್ವಚ್ಛತಾ ಕಾರ್ಮಿಕರನ್ನು ಕರ್ಮಯೋಗಿಗಳು ಎಂದು ಬಣ್ಣಿಸಿದ್ದರು. ಮೇಳದಲ್ಲಿ ಇವರು ಸ್ವಚ್ಛತೆಯನ್ನು ಕಾಪಾಡಲು ನೀಡಿದ ಸೇವೆ ಮತ್ತು ಶ್ರಮವನ್ನು ಪರಿಗಣಿಸಿ ಮೋದಿ ಅವರಿಗೆ ಅತ್ಯುನ್ನತವಾದ ಗೌರವವನ್ನು ನೀಡಿದ್ದರು.
ಕುಂಭ ಮೇಳದ ಪ್ರದೇಶವನ್ನು ಸ್ವಚ್ಛವಾಗಿಡಲು ಈ ಕಾರ್ಮಿಕರು ನಿತ್ಯ ಬೆಳಗ್ಗೆ ಬೇಗ ಏಳುತ್ತಿದ್ದಾರೆ, ತಡರಾತ್ರಿಯವರೆಗೂ ಶ್ರಮವಹಿಸಿ ದುಡಿಯುತ್ತಿದ್ದಾರೆ. ಅವರಿಗೆ ನಮ್ಮ ಶ್ಲಾಘನೆಗಳು ಬೇಡ, ಯಾವುದೇ ಪ್ರತಿಫಲವಿಲ್ಲದೇ ಅವರು ತಮ್ಮ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಮೋದಿ ತಮ್ಮ ಭಾಷಣದಲ್ಲಿ ಸ್ವಚ್ಛತಾ ಕಾರ್ಮಿಕರ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದರು.
ಪ್ರಧಾನಿಯವರು ಈ ಹಿಂದೆ ಹಲವಾರು ಬಾರಿ ದಾನ ಧರ್ಮಗಳನ್ನು ಮಾಡಿದ್ದಾರೆ. ಇತ್ತೀಚೆಗಷ್ಟೇ ಅವರು ತಮಗೆ ಉಡುಗೊರೆಯಾಗಿ ಸಿಕ್ಕ ವಸ್ತುಗಳನ್ನು ಹರಾಜು ಹಾಕಿ ಅದರಿಂದ ಬಂದ 3.40 ಕೋಟಿ ರೂಪಾಯಿಗಳನ್ನು ನಮಾಮಿ ಗಂಗೆ ಯೋಜನೆಗೆ ನೀಡಿದ್ದರು. ಮಾತ್ರವಲ್ಲದೆ ಸಿಯೋಲ್ ಶಾಂತಿ ಪುರಸ್ಕಾರದಿಂದ ಬಂದ 1.30 ಕೋಟಿ ರೂಪಾಯಿಗಳನ್ನು ಅವರು ಗಂಗಾ ನದಿಯ ಪುನರುಜ್ಜೀವನ ಕಾರ್ಯಕ್ಕೆ ದಾನ ಮಾಡಿದ್ದಾರೆ.
2015 ರಲ್ಲಿ ತಮ್ಮ ಉಡುಗೊರೆಗಳನ್ನು ಹರಾಜು ಹಾಕಿ ಅದರಿಂದ ಬಂದ 8.33 ಕೋಟಿ ರೂಪಾಯಿಗಳನ್ನು ಅವರು ನಮಾಮಿ ಗಂಗಾ ಯೋಜನೆಗೆ ನೀಡಿದ್ದರು. ಗುಜರಾತ್ ಸಿಎಂ ಆಗಿದ್ದ ವೇಳೆಯಲ್ಲೂ ಅವರು ತಮಗೆ ಉಡುಗೊರೆ ಸಿಕ್ಕ ವಸ್ತುಗಳನ್ನು ಹರಾಜು ಹಾಕಿ ಅದರಿಂದ ಬಂದ ಹಣವನ್ನು ಗುಜರಾತಿನ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ವಿನಿಯೋಗಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.