ನವದೆಹಲಿ: ಇಂದು ದೇಶದಲ್ಲಿ ಜನೌಷಧಿ ದಿವಸ್ನ್ನು ಆಚರಣೆ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ದೇಶದ ಸುಮಾರು 5 ಸಾವಿರ ಜನೌಷಧಿ ಕೇಂದ್ರಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಜನೌಷಧಿ ಕೇಂದ್ರದ ಮಾಲೀಕರು ಮತ್ತು ಫಲಾನುಭವಿಗಳೊಂದಿಗೆ ಮೋದಿ ಸಂವಾದವನ್ನು ನಡೆಸಲಿದ್ದಾರೆ. ದೇಶದ 652 ಜಿಲ್ಲೆಗಳಲ್ಲಿ ಸುಮಾರು 5050 ಜನೌಷಧಿ ಕೇಂದ್ರಗಳು ಕಾರ್ಯಾಚರಿಸುತ್ತಿವೆ.
ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಮನ್ಸೂಕ್ ಮಾಂಡವೀಯಾ ಅವರು, ‘ಪ್ರಧಾನ ಮಂತ್ರಿ ಭಾರತೀಯ ಜನ್ ಔಷಧಿ ಪರಿಯೋಜನಾದ ಮೂಲಕ ಗುಣಮಟ್ಟದ ಜನರಿಕೆ ಔಷಧಿಗಳನ್ನು ಕೈಗೆಟುಕುವ ದರದಲ್ಲಿ ಜನರಿಗೆ ಒದಗಿಸುವ ನಿಟ್ಟಿನಲ್ಲಿ ಪ್ರಧಾನಿಯವರು ಮಹತ್ವಪೂರ್ಣ ಕ್ರಮವನ್ನು ತೆಗೆದುಕೊಂಡಿದ್ದಾರೆ. 2019ರ ಮಾ.7 ನ್ನು ಜನೌಷಧಿ ದಿವಸ್ ಆಗಿ ದೇಶದಲ್ಲಿ ಆಚರಣೆ ಮಾಡಲಾಗುತ್ತಿದೆ. ದೇಶದ 652 ಜಿಲ್ಲೆಗಳಲ್ಲಿ 5050 ಜನೌಷಧಿ ಕೇಂದ್ರಗಳು ಕಾರ್ಯಾಚರಿಸುತ್ತಿವೆ. 2020ರ ವೇಳೆಗೆ ದೇಶದ ಪ್ರತಿ ಬ್ಲಾಕ್ನಲ್ಲೂ ಒಂದೊಂದು ‘ಪ್ರಧಾನ ಮಂತ್ರಿ ಭಾರತೀಯ ಜನ್ ಔಷಧಿ ಪರಿಯೋಜನಾ’ ಕೇಂದ್ರ ಇರಲಿದೆ’ ಎಂದಿದ್ದಾರೆ.
ಜನೌಷಧಿಗಳ ಬಗ್ಗೆ ಮತ್ತಷ್ಟು ಜಾಗೃತಿ ಮತ್ತು ಅರಿವನ್ನು ಮೂಡಿಸುವ ಉದ್ದೇಶದೊಂದಿಗೆ ಮಾ.7ನ್ನು ಜನೌಷಧಿ ದಿವಸ್ ಆಗಿ ಆಚರಣೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಕಳೆದ 3 ವರ್ಷಗಳಿಂದ ಜನೌಷಧಿಗಳು ಮೂರು ಪಟ್ಟು ಹೆಚ್ಚಿನ ಬೆಳವಣಿಗೆಯನ್ನು ಕಾಣುತ್ತಿವೆ. ಗುಣಮಟ್ಟದ ಔಷಧಿಗಳನ್ನು ಜನರಿಗೆ ಒದಗಿಸುತ್ತಿದೆ. ಪ್ರಸ್ತುತ ದಿನಕ್ಕೆ 10 ರಿಂದ 15 ಲಕ್ಷ ಫಲಾನುಭವಿಗಳನ್ನು ಈ ಕೇಂದ್ರಗಳು ಹೊಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.