ಇಸ್ಲಾಮಾಬಾದ್: ಜಾಗತಿಕ ಒತ್ತಡಕ್ಕೆ ಮಣಿದಿರುವ ಪಾಕಿಸ್ಥಾನ ತನ್ನ ನೆಲೆದಲ್ಲಿರುವ ಉಗ್ರರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಮಂಗಳವಾರದಿಂದ ಅದು ಇಸ್ಲಾಮಿಕ್ ಭಯೋತ್ಪಾದನಾ ಸಂಘಟನೆಗಳನ್ನು ಹತ್ತಿಕ್ಕುವ ಕಾರ್ಯವನ್ನು ಆರಂಭ ಮಾಡಿದ್ದು, ಸರ್ಕಾರ 182 ಮದರಸಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ನಿಷೇಧಿತ ಸಂಘಟನೆಗಳಿಗೆ ಸೇರಿದ ಸುಮಾರು 100 ಮಂದಿಯನ್ನು ಬಂಧನಕ್ಕೊಳಪಡಿಸಿದೆ.
ನಿಯಂತ್ರಣಕ್ಕೆ ತೆಗೆದುಕೊಂಡ ಬಹುತೇಕ ಮದರಸ ಮತ್ತು ಸಂಸ್ಥೆಗಳು ಜೈಶೇ ಇ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದವುಗಳಾಗಿವೆ ಎನ್ನಲಾಗಿದೆ. ಜಮಾತ್ ಉದ್ ದಾವಾ ಸಂಘಟನೆಗೆ ಸೇರಿದ ಹಲವಾರು ಶಾಲೆ, ಆಸ್ಪತ್ರೆಗಳನ್ನೂ ಅಲ್ಲಿನ ಸರ್ಕಾರ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.
ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ, ತಾನು ಭಾರತದ ಒತ್ತಡಕ್ಕೆ ಮಣಿದು ಈ ಕ್ರಮವನ್ನು ಜರುಗಿಸಿಲ್ಲ, ಇದು ನಮ್ಮ ದೀರ್ಘ ಅವಧಿಯ ಯೋಜನೆಯಾಗಿತ್ತು ಎಂದು ಪಾಕಿಸ್ಥಾನದ ಆಂತರಿಕ ಸಚಿವಾಲಯ ಹೇಳಿದೆ.
ಪುಲ್ವಾಮ ದಾಳಿಯ ಬಳಿಕ ಇಡೀ ಜಗತ್ತೇ ಪಾಕಿಸ್ಥಾನವನ್ನು ಅನುಮಾನದ ದೃಷ್ಟಿಯಿಂದ ನೋಡಲಾರಂಭಿಸಿತು. ಈಗಾಗಲೇ ಭಯೋತ್ಪಾದಕ ರಾಷ್ಟ್ರ ಎಂದು ಹಣೆಪಟ್ಟಿ ಕಟ್ಟಿಕೊಂಡಿರುವ ಅದರ ಮೇಲೆ ಇನ್ನಷ್ಟು ಒತ್ತಡಗಳು ಬೀಳಲಾರಂಭಿಸಿದವು. ಭಾರತ ನಡೆಸಿದ ವೈಮಾನಿಕ ದಾಳಿ ಅದನ್ನು ಮತ್ತೆ ಜರ್ಜರಿತವಾಗುವಂತೆ ಮಾಡಿತು. ಈ ಹಿನ್ನಲೆಯಲ್ಲಿ ತಡವಾಗಿ ಎಚ್ಚೆತ್ತುಕೊಂಡು ಉಗ್ರರ ವಿರುದ್ಧ ಕ್ರಮ ಜರುಗಿಸುತ್ತಿದೆ. ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾದ ಕ್ರಮ ಎಂಬುದು ಮುಂದಿನ ದಿನಗಳಲ್ಲಿ ತಿಳಿದು ಬರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.