ನವದೆಹಲಿ: ಭಯೋತ್ಪಾದನೆಯ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತಕ್ಕೆ ಗುಪ್ತಚರ ಮಾಹಿತಿಯ ಹಂಚಿಕೆ ಸೇರಿದಂತೆ ಎಲ್ಲಾ ರೀತಿಯ ನೆರವುಗಳನ್ನು ನೀಡುವುದಾಗಿ ಇಂಗ್ಲೆಂಡ್ ಘೋಷಣೆ ಮಾಡಿದೆ.
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಬ್ರಿಟಿಷ್ ಭದ್ರತಾ ಸಲಹೆಗಾರ ಮಾರ್ಕ್ ಸೆಡ್ವಿಲ್ ಅವರು ವಾರದಲ್ಲಿ ಎರಡು ಬಾರಿ ಫೋನ್ ಸಂಭಾಷಣೆ ನಡೆಸಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
‘ಸೆಡ್ವಿಲ್ ಅವರು ಪುಲ್ವಾಮ ದಾಳಿಯ ಬಳಿಕ ಭಾರತಕ್ಕೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದರು. ಗುಪ್ತಚರ ಹಂಚಿಕೆ ಸೇರಿದಂತೆ ಇನ್ನಿತರ ಸಹಕಾರಗಳ ಮೂಲಕ ಭಾರತದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗೆ ಬೆಂಬಲ ನೀಡುತ್ತೇವೆ. ಭಯೋತ್ಪಾದನಾ ಕೃತ್ಯದ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ನೆರವಾಗುತ್ತೇವೆ ಎಂದಿದ್ದಾರೆ’ ಎಂದು ಮಾಧ್ಯಮ ವರದಿ ಮಾಡಿದೆ.
ಭಾರತ ಮತ್ತು ಪಾಕಿಸ್ಥಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸಲು ಮತ್ತು ಪಾಕ್ನಲ್ಲಿ ಭಯೋತ್ಪಾದನಾ ಸಂಘಟನೆಗಳ ವಿರುದ್ಧ ಕ್ರಮ ಜರುಗಿಸುವಂತೆ ಮಾಡಲು ಇಂಗ್ಲೆಂಡ್ನ ರಾಜತಾಂತ್ರಿಕರು ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿವೆ.
ಯುಕೆ ಪ್ರಧಾನಿ ಥೆರೇಸಾ ಮೇ ಅವರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಫೋನಾಯಿಸಿ, ವಿಂಗ್ ಕಮಾಂಡರ್ ಅಭಿನಂದನ್ ಬಿಡುಗಡೆಯ ಬಗ್ಗೆ ಶ್ಲಾಘನೆಗಳನ್ನು ವ್ಯಕ್ತಪಡಿಸಿದ್ದರು, ಮಾತ್ರವಲ್ಲದೆ ಪಾಕ್ನೊಳಗಿನ ಭಯೋತ್ಪಾದನೆಯ ವಿರುದ್ಧ ಕ್ರಮಕೈಗೊಳ್ಳುವಂತೆ ಸಲಹೆ ನೀಡಿದ್ದರು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.