ನವದೆಹಲಿ: ಭಾರತ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಕಾಳಜಿಯಂತೆ ಇಸ್ಲಾಮಾಬಾದ್ ಉಗ್ರರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರ ಆರೋಪಿಸಿದ್ದು, ನವ ಪಾಕಿಸ್ಥಾನ ಉಗ್ರರ ವಿರುದ್ಧ ನವ ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ಹೇಳಿದೆ.
‘ಒಂದು ವೇಳೆ ಪಾಕಿಸ್ಥಾನ ಅದು ಹೇಳಿದಂತೆ ನವ ಚಿಂತನೆಯ ನವ ಪಾಕಿಸ್ಥಾನವೇ ಆಗಿದ್ದರೆ, ಅದು ತನ್ನ ನೆಲದೊಳಗಿರುವ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನವ ಕ್ರಮವನ್ನು ಜರುಗಿಸಲಿ’ ಎಂದು ವಿದೇಶಾಂಗ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಈ ಮೂಲಕ ಪಾಕ್ ಪಿಎಂ ಇಮ್ರಾನ್ ಖಾನ್ ಅವರು ’ನಯಾ ಪಾಕಿಸ್ಥಾನ’ ಘೋಷಣೆಯನ್ನು ಕುಟುಕಿದ್ದಾರೆ.
ನಮ್ಮ ದೇಶದೊಳಗಿನ ಭಯೋತ್ಪಾದಕರ ವಿರುದ್ಧ ಕ್ರಮವನ್ನು ಜರುಗಿಸುತ್ತಿದ್ದೇವೆ ಎಂದು ಎಂದು ಪಾಕ್ ಪಿಎಂ ಇಮ್ರಾನ್ ಖಾನ್ ಅವರು ನಿನ್ನೆ ಹೇಳಿಕೆ ನೀಡಿದ್ದರು. ಅದಕ್ಕೂ ಮುನ್ನ ಮಾತನಾಡಿದ್ದ ಪಾಕ್ ಸೇನಾ ವಕ್ತಾರ, ಜೈಶೇ ಇ ಮೊಹಮ್ಮದ್ ಸಂಘಟನೆ ನಮ್ಮ ನೆಲದಲ್ಲಿ ಇಲ್ಲ ಎಂದಿದ್ದರು.
ಇದಕ್ಕೆ ಪ್ರತ್ಯುತ್ತರ ನೀಡಿರುವ ರವೀಶ್ ಕುಮಾರ್, ’ಪುಲ್ವಾಮ ದಾಳಿಯನ್ನು ನಾವೇ ಮಾಡಿದ್ದೇವೆ ಎಂದು ಜೈಶೇ ಸಂಘಟನೆ ಹೇಳುತ್ತಿದ್ದರೂ ಪಾಕಿಸ್ಥಾನ ಮಾತ್ರ ಅದನ್ನು ನಿರಾಕರಿಸುತ್ತಿದೆ. ಅವರು ಹೊಣೆಯನ್ನು ಹೊತ್ತುಕೊಂಡಿಲ್ಲ, ಏನೋ ಇಲ್ಲಿ ಗೊಂದಲವಿದೆ ಎಂದು ಪಾಕ್ ವಿದೇಶಾಂಗ ಸಚಿವರು ಹೇಳಿದ್ದಾರೆ. ಪಾಕಿಸ್ಥಾನ ಜೈಶೇ ಅನ್ನು ರಕ್ಷಿಸುವ ಪ್ರಯತ್ನ ನಡೆಸುತ್ತಿದೆಯೇ?’ ಎಂದು ಅವರು ಪ್ರಶ್ನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.