ಮಂಗಳೂರು: ಬಿಜೆಪಿ ಸಾಮಾನ್ಯ ರಾಜಕೀಯ ಪಕ್ಷವಲ್ಲ, ಅದು ಈಗ ಅತ್ಯಂತ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಿದೆ. 1984ರಲ್ಲಿ ಸಂಸತ್ತಿನಲ್ಲಿ ಬಿಜೆಪಿ 2 ಸ್ಥಾನಗಳನ್ನು ಹೊಂದಿತ್ತು, ಇದಕ್ಕಾಗಿ ರಾಜೀವ್ ಗಾಂಧಿ ನಮ್ಮನ್ನು ವ್ಯಂಗ್ಯವಾಡಿದ್ದರು. ಹಲವಾರು ವರ್ಷಗಳ ಅವಿರತ ಪ್ರಯತ್ನದ ಫಲವಾಗಿ 2014ರಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೇರಿದ್ದೇವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಶನಿವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
‘ಬಿಜೆಪಿ ಈಗ ವಿಶ್ವದ ಅತೀ ದೊಡ್ಡ ಪಕ್ಷ, ರಾಜ್ಯ ಬಿಜೆಪಿಯ ಪ್ರತಿ ಪ್ರತಿನಿಧಿಗಳೂ ಪಕ್ಷವನ್ನು ಕಟ್ಟಲು ಕೊಡುಗೆ ನೀಡಿದ್ದಾರೆ ಎಂದರು.
‘ಪುಲ್ವಾಮದ ದಾಳಿಯಲ್ಲಿ ಹುತಾತ್ಮರಾದ ಯೋಧರಲ್ಲಿ ಗುರು ಕರ್ನಾಟಕದವರು. ನಾವು ಆ ದಾಳಿಗೆ ತಕ್ಕ ಪ್ರತ್ಯುತ್ತರವನ್ನು ನೀಡಿದ್ದೇವೆ. ಪಾಕಿಸ್ಥಾನಕ್ಕೆ ದಿಟ್ಟ ಸಂದೇಶವನ್ನು ರವಾನಿಸಿದ್ದೇವೆ. ಭಯೋತ್ಪಾದನೆಯನ್ನು ಪೋಷಿಸಿದ್ದಕ್ಕೆ ಆ ರಾಷ್ಟ್ರ ಬೆಲೆ ತೆರಲಿದೆ’ ಎಂದರು.
‘ಪ್ರಸ್ತುತ ಅಮೆರಿಕಾ, ಚೀನಾ ಮತ್ತು ರಷ್ಯಾ ವಿಶ್ವದ ಬಲಶಾಲಿ ರಾಷ್ಟ್ರಗಳು. 2028ರ ವೇಳೆಗೆ ಭಾರತ ಈ ಮೂರರಲ್ಲಿ ಸ್ಥಾನ ಪಡೆದುಕೊಳ್ಳಲಿದೆ’ ಎಂದರು.
‘ಅಧಿಕಾರಕ್ಕೇರಲು ನಾವು ರಾಜಕೀಯ ಮಾಡುತ್ತಿಲ್ಲ, ಬದಲಿಗೆ ದೇಶವನ್ನು ಅಭಿವೃದ್ಧಿಗೊಳಿಸಲು ಮತ್ತು ಸೂಪರ್ ಪವರ್ನ್ನಾಗಿಸಲು ರಾಜಕೀಯ ಮಾಡುತ್ತಿದ್ದೇವೆ’ ಎಂದರು.
‘ದೇಶದಾದ್ಯಂತ ಕಾಶ್ಮೀರಿ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅವರ ಮೇಲೆ ದಾಳಿಗಳಾಗದಂತೆ ಸರಿಯಾದ ರೀತಿಯಲ್ಲಿ ರಕ್ಷಣೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಮಾಡಿಕೊಂಡಿದ್ದೇನೆ. ಬಿಜೆಪಿ ಪ್ರತಿನಿಧಿಗಳು ಕಾಶ್ಮೀರಿ ವಿದ್ಯಾರ್ಥಿಗಳ ಜೊತೆ ನಿಲ್ಲಬೇಕು’ ಎಂದು ಕರೆ ನೀಡಿದರು.
ಕೆಲವರು ಮೋದಿಯವರ 56 ಇಂಚಿನ ಎದೆಯ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದರು, ಇದೀಗ ಅದು 65 ಇಂಚು ಆಗಿದೆ ಎಂದರು.
ಪ್ರಸ್ತುತ ಕರ್ನಾಟಕದ ಸರ್ಕಾರ ದುರ್ಬಲವಾಗಿದ್ದು, ಪರಸ್ಪರ ಕಚ್ಚಾಡುತ್ತಿದ್ದಾರೆ. ಇಲ್ಲಿ ಬಲಿಷ್ಠ ಸರ್ಕಾರವನ್ನು ತರುವ ಪ್ರತಿಜ್ಞೆಯನ್ನು ನಾವು ಮಾಡಬೇಕಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.