ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು ಪ್ರತಿಪಕ್ಷಗಳ ವಿರುದ್ಧ ಮೂರನೇ ಸರ್ಜಿಕಲ್ ಸ್ಟ್ರೈಕ್ನ್ನು ಮಾಡಲಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಮುಂಬಯಿಯಲ್ಲಿ ಭಾನುವಾರ ಜರುಗಿದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ‘ಈ ರಾಷ್ಟ್ರವು ಪ್ರಧಾನಿ ನರೇಂದ್ರ ಮೋದಿಯವರ ಕೈಯಲ್ಲಿ ಸುರಕ್ಷಿತವಾಗಿದೆ. ಅವರು ಉಗ್ರರ ಶೀಬಿರಗಳ ಮೇಲೆ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ಗಳನ್ನು ನಡೆಸುವ ಧೈರ್ಯ ಮಾಡಿದ್ದಾರೆ’ ಎಂದರು.
‘ಮುಂದಿನ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಮರಳಿ ಬರುತ್ತದೆ. ಇಡೀ ದೇಶ ಮೂರು ಘೋಷಣೆಗಳನ್ನು ಈಗ ಹಾಕುತ್ತಿದೆ. ಅದುವೇ ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ಜೈ ಹಿಂದ್’ ಎಂದರು.
ಕೇಂದ್ರ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದಿರುವ ಅವರು, ಮತದಾರರ ಕುಟುಂಬವನ್ನು ವೈಯಕ್ತಿಕವಾಗಿ ಸಂಪರ್ಕಿಸುವ ಮೂಲಕ ಮಹಿಳಾ ಕಾರ್ಯಕರ್ತರು ಅತ್ಯಂತ ಮಹತ್ವದ ಪಾತ್ರವನ್ನು ನಿಭಾಯಿಸಬೇಕು ಎಂದರು. ಟೀಕೆಗಳನ್ನು ಸಮರ್ಥವಾಗಿ ಎದುರಿಸಿ ದಿಟ್ಟ ಪ್ರತ್ಯುತ್ತರವನ್ನು ನೀಡಬೇಕು ಎಂದರು.
‘ತಾಯಿಯ ಗರ್ಭದೊಳಗಿರುವ ಶಿಶುವಿನಿಂದ ಹಿಡಿದು ವಯಸ್ಸಾಗಿರುವವರವರೆಗೂ ನಮ್ಮ ಸರ್ಕಾರ ಎಲ್ಲರ ಕಾಳಜಿಯನ್ನೂ ವಹಿಸಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಭರವಸೆಯನ್ನು ಈಡೇರಿಸಿದೆ’ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.