ಶ್ರೀನಗರ: ಪುಲ್ವಾಮದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ಭಯೋತ್ಪಾದನಾ ದಾಳಿ ನಡೆದ ತರುವಾಯ ಜಮ್ಮು ಕಾಶ್ಮೀರದಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ತ್ವರಿತಗೊಳಿಸಿವೆ. ದಾಳಿಯ ಬಳಿಕ ಇದುವರೆಗೆ ಒಟ್ಟು 18 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆ ಸೋಮವಾರ ಮಾಹಿತಿಯನ್ನು ನೀಡಿದೆ.
ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು, ಇಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆಗಳ ಮತ್ತು ಹತರಾದ ಉಗ್ರರ ಬಗೆಗಿನ ಮಾಹಿತಿಯನ್ನು ನೀಡಿದ್ದಾರೆ.
’ಫೆಬ್ರವರಿ 14ರಂದು ಪುಲ್ವಾಮದಲ್ಲಿ ಆತ್ಮಾಹುತಿ ದಾಳಿ ನಡೆದ ಬಳಿಕ ಒಟ್ಟು 18 ಉಗ್ರರನ್ನು ಹತ್ಯೆ ಮಾಡಲಾಗಿದೆ. ದಾಳಿ ಮಾಸ್ಟರ್ ಮೈಂಡ್ ಮುದಸಿರ್ ಅಹಮದ್ ಖಾನ್ನನ್ನು ಎನ್ಕೌಂಟರ್ ಮಾಡಲಾಗಿದೆ. ಹತ್ಯೆಯಾದ ಉಗ್ರರ ಪೈಕಿ 6 ಮಂದಿ ಪಾಕಿಸ್ಥಾನದವರು’ ಎಂದು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ಎಸ್ಪಿ ಪಾಣಿ ತಿಳಿಸಿದ್ದಾರೆ.
ತ್ರಾಲ್ ನಿವಾಸಿಯಾಗಿದ್ದ ಖಾನ್ ಎಲೆಕ್ಟ್ರಿಷಿಯನ್ ಪದವೀಧರನಾಗಿದ್ದು, 2007ರಲ್ಲಿ ಜೈಶೇ ಇ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರ್ಪಡೆಯಾದ, 2018ರಿಂದ ಮನೆಯಿಂದ ಈತ ನಾಪತ್ತೆಯಾದವ ಮತ್ತೆ ವಾಪಾಸ್ ಬಂದಿರಲಿಲ್ಲ, ಜೈಶೇಯೊಂದಿಗೆ ಸಕ್ರಿಯನಾಗಿದ್ದ ಎನ್ನಲಾಗಿದೆ.
ಪುಲ್ವಾಮ ದಾಳಿಯ ಬಳಿಕ ದಕ್ಷಿಣ ಕಾಶ್ಮೀರದ ತ್ರಾಲ್ ಪ್ರದೇಶದಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಶೋಧ ಕಾರ್ಯಾಚರಣೆಯ ವೇಳೆ ಉಗ್ರರಿಂದ ಗುಂಡಿನ ದಾಳಿಗಳು ನಡೆದ ಪರಿಣಾಮ ಪ್ರತ್ಯುತ್ತರವಾಗಿ ಎನ್ಕೌಂಟರ್ ನಡೆಸಲಾಗಿದೆ ಎಂದರು.
KJS Dhillon, Corps Commander of Chinar Corps, Indian Army: In last 21 days, we have eliminated 18 terrorists, out of them 14 being from JeM, 6 out of 14 were main commanders. JeM’s 2nd commander Mudasir-main conspirator in national highway convoy attack-has also been eliminated. pic.twitter.com/3naaKhfOo0
— ANI (@ANI) March 11, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.