ಬೆಳ್ತಂಗಡಿ : ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಮೈಸೂರು ಹಿಂದಿ ಪ್ರಚಾರ ಪರಿಷತ್ ಬೆಂಗಳೂರು ಇವರಿಂದ ನಡೆಸಲ್ಪಡುವ ಬೆಳಾಲು ಶ್ರೀ ಸರಸ್ವತಿ ಅನುದಾನಿತ ಶಾಲೆಯಲ್ಲಿ ಹಾಜರಾಜ ಹಿಂದಿ ಪ್ರಥಮದಿಂದ ಹಿಂದಿ ರತ್ನದ ವರೆಗಿನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ಪಡೆದಿದೆ. ಹಿಂದಿ ರತ್ನ ದ್ವಿತೀಯ ಖಂಡ ಪರೀಕ್ಷೆಯಲ್ಲಿ ನಾರಾವಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜ್ಞಾನೇಶ್ವರಿ ಎಲ್. ರಾಜ್ಯ ಮಟ್ಟದಲ್ಲಿ 5ನೇ ರ್ಯಾಂಕ್ ಪಡೆದಿದ್ದಾರೆ.
ಹಿಂದಿ ಉತ್ತಮ ಪ್ರಥಮ ಖಂಡದಲ್ಲಿ ಹಾಜರಾದ 32 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹಿಂದಿ ಉತ್ತಮ ದ್ವಿತೀಯ ಖಂಡದಲ್ಲಿ ಹಾಜರಾದ 46 ವಿದ್ಯಾರ್ಥಿಗಳಲ್ಲಿ ೪೦ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಹಿಂದಿ ರತ್ನ ಪ್ರಥಮ ಖಂಡದಲ್ಲಿ ಹಾಜರಾದ 27 ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹಿಂದಿ ರತ್ನ ದ್ವಿತೀಯ ಖಂಡದಲ್ಲಿ ಹಾಜರಾದ 26 ವಿದ್ಯಾರ್ಥಿಗಳಲ್ಲಿ ೩೫ ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಮುಂದಿನ ಪರೀಕ್ಷೆಗೆ ಹಾಜರಾಗಲು ಆವೇದನಾ ಪತ್ರ ಕೊಡಲು ಜು. 10 ಕೊನೆಯ ದಿನಾಂಕವಾಗಿದ್ದು ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೂ ಪರಿಷತ್ನಿಂದಲೇ ಪುಸ್ತಕಗಳನ್ನು ನೀಡಲಾಗುತ್ತದೆ. ಉಚಿತ ತರಗತಿಗಳನ್ನು ನಡೆಸಲಾಗುತ್ತದೆ ಎಂದು ಹಿಂದಿ ಪ್ರಚಾರಕ ಚಿದಾನಂದ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.