ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದು, ಮಹಾತ್ಮ ಗಾಂಧೀಜಿಯವರು ತೋರಿಸಿದ ಹಾದಿಯನ್ನು ಪ್ರಮುಖ ಪ್ರತಿಪಕ್ಷ ಮರೆತಿದೆ ಎಂದಿದ್ದಾರೆ. ‘When a handful of salt shook an Empire!” ಎಂಬ ಶೀರ್ಷಿಕೆಯ ತಮ್ಮ ಬ್ಲಾಗ್ನಲ್ಲಿ ಅವರು ಕಾಂಗ್ರೆಸ್ನ್ನು ಕಟುವಾಗಿ ಟೀಕಿಸಿದ್ದಾರೆ. ಉಪ್ಪಿನ ಸತ್ಯಾಗ್ರಹಕ್ಕೆ 89 ವರ್ಷಗಳು ಇಂದಿಗೆ ಪೂರೈಸಿದ ಹಿನ್ನಲೆಯಲ್ಲಿ ಮೋದಿ ಈ ಬ್ಲಾಗ್ನ್ನು ಬರೆದಿದ್ದು, ರಾಷ್ಟ್ರಪಿತ ಕೊಡುಗೆಗಳನ್ನು ಕೊಂಡಾಡಿದ್ದಾರೆ.
ಬ್ರಿಟಿಷರು ಭಾರತದ ಮೇಲೆ ಹೇರಿದ ಅಸಮಾನತೆ ಮತ್ತು ಅನ್ಯಾಯದ ವಿರುದ್ಧ ಗಾಂಧೀಜಿ ಹೋರಾಟ ನಡೆಸಿದ್ದರು ಎಂದಿದ್ದಾರೆ.
ಕಾಂಗ್ರೆಸ್ ಪಕ್ಷ ಜಾತಿ ಮತ್ತು ಧಾರ್ಮಿಕ ಆಧಾರದಲ್ಲಿ ದೇಶವನ್ನು ವಿಭಜನೆ ಮಾಡುತ್ತಿದೆ, ವಂಶಾಡಳಿತ ಸಂಸ್ಕೃತಿಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
‘ಹಲವಾರು ಬಾರಿ, ತಾವು ಅಸಮಾನತೆ ಮತ್ತು ಜಾತಿ ವಿಂಗಡನೆಯನ್ನು ನಂಬುದಿಲ್ಲ ಎಂದು ರಾಹುಲ್ ಹೇಳಿದ್ದಾರೆ. ಆದರೆ ದುರಾದೃಷ್ಟವಶಾತ್ ಕಾಂಗ್ರೆಸ್ ದೇಶವನ್ನು ವಿಭಜನೆ ಮಾಡುತ್ತಿದೆ. ಜಾತಿ ದಂಗೆಗಳು, ದಲಿತ ವಿರೋಧಿ ದಂಗೆಗಳು ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲೇ ನಡೆದಿದೆ’ ಎಂದಿದ್ದಾರೆ.
‘ಮಹಾತ್ಮ ಗಾಂಧೀಜಿಯವರು ಕಾಂಗ್ರೆಸ್ ಸಂಸ್ಕೃತಿಯನ್ನು ಚೆನ್ನಾಗಿಯೇ ಅರ್ಥ ಮಾಡಿಕೊಂಡಿದ್ದರು, ಅದಕ್ಕಾಗಿಯೇ ಕಾಂಗ್ರೆಸ್ ವಿಸರ್ಜನೆಯಾಗಬೇಕು ಎಂದು ಅವರು ಬಯಸಿದ್ದರು. ದುರಾಡಳಿತ ಮತ್ತು ಭ್ರಷ್ಟಾಚಾರ ಒಟ್ಟೊಟ್ಟಿಗೆ ಸಾಗುತ್ತವೆ ಎಂದು ಅವರು ಹೇಳಿದ್ದರು, ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದಿರುವ ಅವರು, ಕಾಂಗ್ರೆಸ್ ಕಂಠದವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಲ್ಲಿದ್ದಲು, ಟೆಲಿಕಾಂ ರಕ್ಷಣೆ, ನೀರಾವರಿ, ಕ್ರೀಡೆ ಹೀಗೆ ಎಲ್ಲಾ ವಲಯದಲ್ಲೂ ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂಬುದನ್ನು ದೇಶ ಜನರು ನೋಡಿದ್ದಾರೆ’ ಎಂದಿದ್ದಾರೆ.
‘ಕಾಂಗ್ರೆಸ್ ನಾಯಕರು ಬಡವರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡುವ ಬದಲು ತಮ್ಮ ಬ್ಯಾಂಕ್ ಖಾತೆಗಳನ್ನು ತುಂಬಿಸುವಲ್ಲಿ ಮತ್ತು ದುಬಾರಿ ಜೀವನವನ್ನು ನಡೆಸುವಲ್ಲಿ ನಿರತರಾಗಿದ್ದಾರೆ. ಮಹಾತ್ಮ ಗಾಂಧೀಜಿ ವಂಶಾಡಳಿತವನ್ನು ವಿರೋಧಿಸಿದ್ದರು, ಕಾಂಗ್ರೆಸ್ ಅದನ್ನು ಉತ್ತೇಜಿಸುತ್ತಿದೆ’ ಎಂದಿದ್ದಾರೆ.
ಮಹಾತ್ಮ ಗಾಂಧೀಜಿಯವರು ಉಪ್ಪಿನ ಸತ್ಯಾಗ್ರಹವನ್ನು ಮಾಡಿ ಬ್ರಿಟಿಷ್ ಆಡಳಿತವನ್ನು ನಲುಗಿಸಿದ ಬಗ್ಗೆ ಅವರು ಉಲ್ಲೇಖ ಮಾಡಿದ್ದಾರೆ. ಸರ್ದಾರ್ ವಲ್ಲಭಾಭಾಯ್ ಅವರನ್ನು ಕೊಂಡಾಡಿ, ದಂಡೀ ಮಾರ್ಚ್ ಹಿಂದಿನ ಶಿಲ್ಪಿ ಎಂದಿದ್ದಾರೆ.
ಇಂದು ಭಾರತ ಮಹಾತ್ಮ ಗಾಂಧೀಜಿಯವರ ಹಾದಿಯಲ್ಲಿ ನಡೆಯುವ ಸರ್ಕಾರವನ್ನು ಹೊಂದಿರುವುದು ನಿಜಕ್ಕೂ ಅದೃಷ್ಟ, ಕಾಂಗ್ರೆಸ್ ಸಂಸ್ಕೃತಿಯಿಂದ ದೇಶವನ್ನು ಮುಕ್ತ ಮಾಡುವತ್ತ ನಾವು ಹೆಜ್ಜೆ ಇಡುತ್ತಿದ್ದೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.