ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಶುಕ್ರವಾರ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಬಿಸಿನೆಸ್ ಲೈನ್ ಚೇಂಜ್ ಮೇಕರ್ ಆಫ್ ದಿ ಇಯರ್ ಪ್ರಶಸ್ತಿಯನ್ನು ಪ್ರದಾನಿಸಿದ್ದಾರೆ. ಸರಕು ಮತ್ತು ಸೇವಾ ತೆರಿಗೆಯನ್ನು ಯಶಸ್ವಿಯಾಗಿ ಪರಿಚಯಿಸಿದ್ದಾಗಿ ಈ ಪ್ರಶಸ್ತಿಯನ್ನು ಜೇಟ್ಲಿ ಅವರಿಗೆ ನೀಡಲಾಗಿದೆ. ಸಿಂಗ್ ಅವರು ಈ ಪ್ರಶಸ್ತಿಯನ್ನು ಪ್ರದಾನಿಸಿರುವುದರಿoದ ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡಲು ಬಿಜೆಪಿಗೆ ಅವಕಾಶ ಸಿಕ್ಕಿದಂತಾಗಿದೆ.
ಸರಕು ಮತ್ತು ಸೇವಾ ತೆರಿಗೆಯನ್ನು ಸದಾ ಟಾರ್ಗೆಟ್ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಬಿಜೆಪಿ “ಇಂದು ಜಿಎಸ್ಟಿ ಕೌನ್ಸಿಲ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬಿಸಿನೆಸ್ ಲೈನ್ ಚೇಂಜ್ ಮೇಕರ್ ಆಫ್ ದಿ ಇಯರ್ ” ಪ್ರಶಸ್ತಿಯನ್ನು ಪ್ರದಾನಿಸಿದ್ದಾರೆ. ರಾಹುಲ್ ಗಾಂಧಿಯವರೇ ಗಬ್ಬರ್ ಸಿಂಗ್ ತೆರಿಗೆ ಪದ್ಧತಿಯ ಬಗ್ಗೆ ಈಗ ಏನು ಹೇಳುತ್ತೀರಿ? ಎಂದು ಟ್ವಿಟ್ಟರ್ ಮೂಲಕ ಪ್ರಶ್ನಿಸಿದೆ.
Today GST COUNCIL got BUSINESS LINE-CHANGE MAKER OF YEAR AWARD. Presented to Finance Minister Shri @arunjaitley by Dr Manmohan Singh.
Gabbar Singh Tax, Rahul Gandhi? pic.twitter.com/TZO0gMT2e3
— BJP (@BJP4India) March 15, 2019
ಜಿಎಸ್ಟಿ ಮಂಡಳಿಯ ಪರವಾಗಿ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ 200 ಅತಿಥಿಗಳ ಉಪಸ್ಥಿತಿಯಲ್ಲಿ ಜೇಟ್ಲಿಯವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಸರಕು ಮತ್ತು ಸೇವಾ ತೆರಿಗೆಯನ್ನು ಸದಾ ಗಬ್ಬರ್ ಸಿಂಗ್ ತೆರಿಗೆ ಪದ್ಧತಿ ಎಂದು ಆರೋಪಿಸುತ್ತಲೇ ಬಂದಿದೆ. ಅಲ್ಲದೆ ನಾವು ಅಧಿಕಾರಕ್ಕೆ ಬಂದ ತಕ್ಷಣ ಪ್ರಸ್ತುತ ಇರುವ ಸರಕು ಮತ್ತು ಸೇವಾ ತೆರಿಗೆ ಪದ್ಧತಿಯನ್ನು ತೆಗೆದು ಹೊಸದಾಗಿ ಜಿಎಸ್ಟಿಯನ್ನು ಅನುಷ್ಠಾನಕ್ಕೆ ತರುವುದಾಗಿ ಪ್ರಚಾರ ಕಾರ್ಯದಲ್ಲಿ ಹೇಳುತ್ತಾ ಬಂದಿದೆ. ಆದರೆ ಇಂದು ಜಿಎಸ್ಟಿ ಮಂಡಳಿಗೆ ಮನಮೋಹನ್ ಸಿಂಗ್ ಅವರೇ ಪ್ರಶಸ್ತಿಯನ್ನು ಪ್ರದಾನ ಮಾಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂಥರಾ ಮುಜುಗರವನ್ನು ಉಂಟು ಮಾಡಿದೆ.
ಮನಮೋಹನ್ ಸಿಂಗ್ ಅವರು ಕೂಡ ಜಿಎಸ್ಟಿ ವಿರುದ್ಧ ಟೀಕೆಗಳನ್ನು ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಜಿಎಸ್ಟಿಯಿಂದ ಭಾರತದ ಆರ್ಥಿಕತೆ ಕೆಳಗಿಳಿದಿದೆ ಎಂದು ಅವರು ಈ ಹಿಂದೆ ಆರೋಪಿಸಿದ್ದಾರೆ.
ಜಿಎಸ್ಟಿಯನ್ನು ಅನುಷ್ಠಾನಕ್ಕೆ ತರುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಹಿಂದಿನಿಂದಲೂ ಹೊಸ ತೆರಿಗೆ ಪದ್ಧತಿಯ ಬಗ್ಗೆ ಭರವಸೆಗಳನ್ನು ವ್ಯಕ್ತಪಡಿಸಿದ್ದಾರೆ. ಜಿಎಸ್ಟಿಯು ಆರಂಭಿಕವಾಗಿ ಜನರಿಗೆ ಒಂದಿಷ್ಟು ತೊಂದರೆಗಳನ್ನು ನೀಡಿದೆ ಎಂಬುದನ್ನು ಒಪ್ಪಿಕೊಂಡಿರುವ ಪ್ರಧಾನಿಯವರು, ಈಗ ಅದು ಆರ್ಥಿಕ ಸುಧಾರಣೆಯಲ್ಲಿ ಮಹತ್ವದ ಕೊಡುಗೆಯನ್ನು ನೀಡುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.