ನವದೆಹಲಿ: ವಿಕಲಚೇತನರಿಗೆ ವ್ಹೀಲ್ ಚೇರ್, ಮಂದ ದೃಷ್ಟಿವುಳ್ಳವರಿಗೆ ಭೂತ ಕನ್ನಡಿ, ದೃಷ್ಟಿ ಇಲ್ಲದವರಿಗಾಗಿ ಬ್ರೈಲ್ ಲಿಪಿ – ಇವುಗಳನ್ನು ಈ ಬಾರಿಯ ಚುನಾವಣೆಯ ಸಂದರ್ಭದಲ್ಲಿ ಅಳವಡಿಸಲಾಗುತ್ತಿದೆ. ಈಗಾಗಲೇ ಇದಕ್ಕಾಗಿ 35 ಸಾವಿರ ವ್ಹೀಲ್ ಚೇರ್, 52 ಸಾವಿರ ಭೂತಕನ್ನಡಿ ಮತ್ತು 2213 ಬ್ರೈಲ್ ಲಿಪಿಗಳನ್ನು ಸಜ್ಜುಗೊಳಿಸಲಾಗಿದೆ. ಫೆಬ್ರವರಿಯವರೆಗಿನ ಪರಿಶೀಲನೆಯ ಪ್ರಕಾರ ರಾಜ್ಯದಲ್ಲಿ ಒಟ್ಟು 4,03,907 ದಿವ್ಯಾಂಗ ಮತದಾರರು ಇರುವುದು ಕಂಡು ಬಂದಿದೆ ಎಂದು ಕರ್ನಾಟಕ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ದಿವ್ಯಾಂಗ ಮತ್ತು ಹಿರಿಯ ನಾಗರಿಕರಿಗೆ ಪ್ರತ್ಯೇಕ ಸರತಿ ಸಾಲುಗಳನ್ನು ವ್ಯವಸ್ಥೆ ಮಾಡಲಾಗುವುದು, ವಾಹನದ ವ್ಯವಸ್ಥೆಯನ್ನೂ ಕಲ್ಪಿಸಿಕೊಡಲಾಗುವುದು, ಇವರ ಸಹಾಯಕ್ಕಾಗಿ 31000 ಸಹಾಯಕರನ್ನು ನೇಮಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಒಟ್ಟು 58,180 ಮತಗಟ್ಟೆಗಳಲ್ಲಿ ರ್ಯಾಂಪ್ಗಳನ್ನು ಅಳವಡಿಸಲಾಗುತ್ತದೆ, ಎಲ್ಲಾ ಮತಗಟ್ಟೆಗಳು ಗ್ರೌಂಡ್ ಫ್ಲೋರ್ನಲ್ಲಿ ಇರುವಂತೆ ನೋಡಿಕೊಳ್ಳುತ್ತಿದ್ದೇವೆ ಎಂದಿದ್ದಾರೆ.
ಕರ್ನಾಟಕ ಎರಡು ಹಂತದಲ್ಲಿ ಚುನಾವಣೆಯನ್ನು ಎದುರಿಸುತ್ತಿದೆ. ಎಪ್ರಿಲ್ 18ರಂದು ಮತ್ತು ಎಪ್ರಿಲ್ 23 ರಂದು ಚುನಾವಣೆ ನಡೆಯಲಿದೆ. ಮೇ 23 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
2012ರಲ್ಲಿ ಪ್ಯಾರಾ ಒಲಿಂಪಿಕ್ಸ್ನಲ್ಲಿ ಬೆಳ್ಳಿಯ ಪದಕವನ್ನು ಗೆದ್ದಿರುವ ಗಿರೀಶ್ ಎನ್. ಗೌಡ ಅವರು ಚುನಾವಣಾ ರಾಯಭಾರಿಯಾಗಿ ಮುಂದುವರೆಯಲಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.