ನವದೆಹಲಿ: ದೇಶದ ಮೊದಲ ಲೋಕಪಾಲರಾಗಿ ನ್ಯಾ.ಪಿನಾಕಿ ಚಂದ್ರ ಘೋಷ್ ಅವರು ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.
ನ್ಯಾ.ಘೋಷ್ ಅವರು ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿದ್ದು, ಮಾರ್ಚ್ 19ರಂದು ದೇಶದ ಮೊದಲ ಲೋಕಪಾಲರಾಗಿ ಆಯ್ಕೆಯಾದರು. ಭ್ರಷ್ಟಾಚಾರದ ವಿರುದ್ಧ ಲೋಕಪಾಲ ಸಂಸ್ಥೆ ಹೋರಾಡಲಿದೆ.
ನ್ಯಾಯಮೂರ್ತಿಗಳಾದ ದಿಲೀಪ್ ಬಿ ಬೊಸ್ಸಾಲೆ, ಪ್ರದೀಪ್ ಕುಮಾರ್ ಮೊಹಂತಿ, ಅಭಿಲಾಶಾ ಕುಮಾರಿ ಮತ್ತು ಅಜಯ್ ಕುಮಾರ್ ತ್ರಿಪಾಠಿ ಲೋಕಪಾಲದಲ್ಲಿನ ಐದು ನ್ಯಾಯಾಂಗ ಸದಸ್ಯರಾಗಿದ್ದಾರೆ. ದಿನೇಶ್ ಕುಮಾರ್ ಜೈನ್, ಅರ್ಚನಾ ರಾಮಸುಂದರ್, ಮಹೇಂದರ್ ಸಿಂಗ್ ಮತ್ತು ಡಾ. ಇಂದ್ರಜೀತ್ ಪ್ರಸಾದ್ ಗೌತಮ್ ಅವರು ನ್ಯಾಯಾಂಗೇತರ ಸದಸ್ಯರಾಗಿದ್ದಾರೆ.
66 ವರ್ಷ ವಯಸ್ಸಿನ ನ್ಯಾ. ಘೋಸ್ ಅವರು, ಮೇ 2017 ರಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದಾರೆ. ಅವರು ಪ್ರಸ್ತುತ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್ ಸಿ) ಸದಸ್ಯರಾಗಿದ್ದಾರೆ. ಅವರು 1997 ರಲ್ಲಿ ಕಲ್ಕತ್ತಾ ಹೈಕೋರ್ಟ್ ನ ನ್ಯಾಯಾಧೀಶರಾಗಿ ನೇಮಕಗೊಂಡರು. ಆಂಧ್ರಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಕಾಲದಲ್ಲಿ ಇವರು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ತಪ್ಪಿತಸ್ಥೆಯನ್ನಾಗಿ ಮಾಡಿದ್ದರು.
Delhi: Justice Pinaki Chandra Ghose with PM Narendra Modi, President Ram Nath Kovind, Vice-President M Venkaiah Naidu and Chief Justice of India Ranjan Gogoi after taking oath as the first Lokpal of India pic.twitter.com/f5BeIaVmYq
— ANI (@ANI) March 23, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.