ನವದೆಹಲಿ: ಕೇಂದ್ರ ಸಚಿವೆ ಉಮಾ ಭಾರತಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಘೋಷಣೆ ಮಾಡಿದ್ದಾರೆ. ಚುನಾವಣೆಗೆ ನಿಲ್ಲೋದಿಲ್ಲ ಎಂದು ಅವರು ತಿಳಿಸಿದ ಹಿನ್ನಲೆಯಲ್ಲಿ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಲಾಗಿದೆ.
‘ಉಮಾ ಭಾರತಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರವನ್ನು ಬರೆದು ಚುನಾವಣೆಗೆ ನಿಲ್ಲದಿರಲು ನಿರ್ಧರಿಸಿದ್ದಾಗಿ ತಿಳಿಸಿದರು. ಈ ಹಿನ್ನಲೆಯಲ್ಲಿ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಲಾಗಿದೆ’ ಎಂದು ಜೆಪಿ ನಡ್ಡಾ ತಿಳಿಸಿದ್ದಾರೆ.
17ನೇ ಲೋಕಸಭಾ ಚುನಾವಣೆಗೆ ಸ್ಪರ್ಧೆ ನಡೆಸಲು ಇಚ್ಛಿಸುವುದಿಲ್ಲ ಎಂದು ಉಮಾ ಭಾರತಿ ಹಿಂದೆಯೇ ಘೋಷಣೆ ಮಾಡಿದ್ದರು. ಅಲ್ಲದೇ, ಪಕ್ಷದ ಇತರ ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಿದ್ಧ ಇರುವುದಾಗಿ ಅವರು ತಿಳಿಸಿದ್ದರು.
ಈ ಬಗ್ಗೆ ಟ್ವಿಟ್ ಮಾಡಿರುವ ಉಮಾ, ‘ಸ್ನೇಹಿತರೇ, ಚುನಾವಣೆಗೆ ಸ್ಪರ್ಧೆ ನಡೆಸುವುದಿಲ್ಲ ಎಂದಿದ್ದೆ, ಅದನ್ನೇ ಪುನರುಚ್ಚರಿಸಿ ಅಮಿತ್ ಶಾ ಅವರಿಗೆ ಪತ್ರವನ್ನೂ ಬರೆದಿದ್ದೆ. ಈಗ ಪಕ್ಷ ಅದನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ’ ಎಂದರು.
‘ಇನ್ನೂ ಒಂದೂವರೆ ವರ್ಷಗಳ ಕಾಲ ನಾನು ಜೀವನವನ್ನು ಗಂಗೆಯ ತಟದಲ್ಲಿ ಕಳೆಯಬೇಕೆಂದಿದ್ದೇನೆ. ಆದರೆ, ಈ ಅವಧಿಯಲ್ಲಿ ಪಕ್ಷದ ಸೂಚನೆಯಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತೇನೆ. ನನಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ’ ಎಂದಿದ್ದಾರೆ.
ರಾಜಕೀಯದಿಂದ ನಿವೃತ್ತಳಾಗುವುದಿಲ್ಲ ಎಂಬುದನ್ನು ದೃಢಪಡಿಸಿದ ಅವರು, ಕೊನೆಯ ಉಸಿರಿರುವವರೆಗೂ ರಾಜಕೀಯದಲ್ಲಿರುತ್ತೇನೆ, ಬಡವರ ಹಕ್ಕಿಗಾಗಿ ರಾಜಕೀಯದಲ್ಲಿರುತ್ತೇನೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.