ನವದೆಹಲಿ: ಲೋಕಸಭಾ ಚುನಾವಣೆಗಾಗಿ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಬಿಜೆಪಿಯು, ಮಂಗಳವಾರ ದೇಶದಾದ್ಯಂತ 250 ಸಮಾವೇಶಗಳನ್ನು ಆಯೋಜನೆಗೊಳಿಸಿದೆ. ರಾಷ್ಟ್ರೀಯತೆಯ ವಿಷಯದಿಂದ ಹಿಡಿದು ರಾಹುಲ್ ಗಾಂಧಿಯವರ ವಾರ್ಷಿಕ ರೂ.72,000 ನೀಡುವ ಭರವಸೆಯವರೆಗೂ ವಿಷಯವನ್ನು ಪ್ರಸ್ತಾಪಿಸಿ ಬಿಜೆಪಿ ಮುಖಂಡರುಗಳು ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಂಗಳವಾರ ಬಿಜೆಪಿಯ ‘ವಿಜಯ ಸಂಕಲ್ಪ ಸಭಾ’ದ ಎರಡನೇಯ ದಿನವಾಗಿದೆ. ಲೋಕಸಭಾ ಚುನಾವಣೆಗೆ ಜನರ ಹೆಚ್ಚಿನ ಬೆಂಬಲವನ್ನು ಪಡೆದುಕೊಳ್ಳುವ ಸಲುವಾಗಿ ಭಾನುವಾರ ಈ ಅಭಿಯಾನವನ್ನು ಬಿಜೆಪಿ ಆರಂಭಿಸಿತ್ತು.
ಮೊರಾದಾಬಾದ್ನಲ್ಲಿ ಈ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ‘ಪಾಕಿಸ್ಥಾನದಲ್ಲಿ ಭಾರತದ ವಿರುದ್ಧ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಗಳಿಗೆ ಕಟುವಾಗಿ ಪ್ರತಿಕ್ರಿಯೆ ನೀಡಿದ ದೇಶದ ಏಕೈಕ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದಾರೆ’ ಎಂದರು.
‘ಪುಲ್ವಾಮ ದಾಳಿಯ ಬಳಿಕ ಯಾವುದೇ ವಿಳಂಬ ಮಾಡದೆ ನಾವು ಪಾಕಿಸ್ಥಾನಕ್ಕೆ ಪ್ರತಿಕ್ರಿಯೆಯನ್ನು ನೀಡಿದ್ದೇವೆ, ಆದರೆ ಪ್ರತಿಪಕ್ಷಗಳು ಶಾಂತಿ ಮಾತುಕತೆಗೆ ಒತ್ತಾಯಿಸುತ್ತಿದ್ದರು’ ಎಂದರು.
ಬಾಲಾಕೋಟ್ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಸತ್ತ ಉಗ್ರರ ಬಗ್ಗೆ ಅನುಮಾನಪಡುವ ಮೂಲಕ ಪ್ರತಿಪಕ್ಷಗಳು ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಅವಮಾನ ಮಾಡಿದೆ ಎಂದಿದ್ದಾರೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಉಮಾಭಾರತಿ, ಪಿಯೂಶ್ ಗೋಯಲ್ ಎಲ್ಲರೂ ವಿವಿಧೆಡೆ ನಡೆದ ‘ವಿಜಯ ಸಂಕಲ್ಪ ಸಭಾ’ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.