ಶ್ರೀನಗರ: ಜಮ್ಮು ಕಾಶ್ಮೀರದ ಬುದ್ಗಾಂ ಜಿಲ್ಲೆಯ ಸುತ್ಸು ಗ್ರಾಮದಲ್ಲಿ ಪ್ರಸ್ತುತ ನಡೆಯುತ್ತಿರುವ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರವಾದಿಗಳನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಕನಿಷ್ಠ ಇಬ್ಬರು ಉಗ್ರರು ಅವಿತುಕೊಂಡಿರುವ ಶಂಕೆ ಇದೆ. ಘಟನೆಯಲ್ಲಿ ನಾಲ್ವರು ಯೋಧರಿಗೆ ಗಾಯಗಳಾಗಿವೆ.
ಭದ್ರತಾ ಪಡೆಗಳು ಸ್ಥಳದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.
ಗುರುವಾರ ದಕ್ಷಿಣ ಕಾಶ್ಮೀರದ ಅನಂತ್ನಾಗ್ ಕ್ಷೇತ್ರದ ಬಿಜ್ಬೇಹರದಲ್ಲಿ ಹಿಜ್ನುಲ್ ಮುಜಾಹಿದ್ದೀನ್ ಉಗ್ರನನ್ನು ಬಂಧಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಪಡೆಗಳು ರಮೀಝ್ ಅಹ್ಮದ್ ದಾರ್ ಎಂಬ ಉಗ್ರನನ್ನು ಬಂಧನಕ್ಕೊಳಪಡಿಸಿದ್ದವು.
ಶೋಪಿಯಾನದಲ್ಲಿ ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಹತ್ಯೆಯಾದ ಇಬ್ಬರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಲಷ್ಕರ್ ಇ ತೋಯ್ಬಾ ಸಂಘಟನೆಯ ಜೊತೆ ಸಂಪರ್ಕ ಹೊಂದಿದವರು ಎಂದು ಹೇಳಲಾಗುತ್ತಿದೆ. ಕುಪ್ವಾರದ ಹಂಡ್ವಾರದಲ್ಲಿ ಹತನಾದ ಉಗ್ರ ಜೈಶೇ ಇ ಮೊಹಮ್ಮದ್ ಸಂಘಟನೆಗೆ ಸೇರಿದವರು ಎನ್ನಲಾಗಿದೆ. ಈ ಮೃತ ಉಗ್ರರು ಹಲವಾರು ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಮತ್ತು ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದವು.
ಪುಲ್ವಾದ ದಾಳಿ ನಡೆದ ಬಳಿಕ ಕಣಿವೆ ರಾಜ್ಯದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ತೀವ್ರಗೊಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.