ನವದೆಹಲಿ: ಬ್ರ್ಯಾಂಡ್ ಮೋದಿ 2014ಕ್ಕಿಂತಲೂ 2019ರಲ್ಲಿ ಅತ್ಯಂತ ಬಲಿಷ್ಠವಾಗಿದೆ ಮತ್ತು ಬಿಜೆಪಿ ಹಿಂದಿಗಿಂತಲೂ ಈ ಬಾರಿ ಹೆಚ್ಚು ಸೀಟುಗಳನ್ನು ಪಡೆದುಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಜೀ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಅಭಿಪ್ರಾಯಿಸಿದ್ದಾರೆ.
ಪಾಕಿಸ್ಥಾನದ ಬಾಲಕೋಟ್ನ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿ ರಾಜಕೀಯ ವಿಷಯವಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಕಳೆದ ಐದು ವರ್ಷಗಳಲ್ಲಿ ಬಲಿಷ್ಠವಾಗುತ್ತಲೇ ಬಂದಿದೆ ಮತ್ತು ಜನರಿಗೆ ಅವರು ಮಾಡಿರುವ ಸಾಧನೆಗಳ ಬಗ್ಗೆ ಸ್ಪಷ್ಟ ಅರಿವು ಇದೆ. ಜನರು ದೇಶದ ಅಭಿವೃದ್ಧಿ, ಸುರಕ್ಷತೆ ಮತ್ತು ಭದ್ರತೆಗಾಗಿ ದುಡಿಯುವ ಸರ್ಕಾರವನ್ನು ಮಾತ್ರ ಆಯ್ಕೆ ಮಾಡುತ್ತಾರೆ ಎಂದರು.
‘2014 ಮತ್ತು 2019 ಕ್ಕೂ ಇರುವ ವ್ಯತ್ಯಾಸವೇನೆಂದರೆ ಕಳೆದ ಚುನಾವಣೆಗಿಂತಲೂ ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ. ಜನರಿಗೆ ನರೇಂದ್ರ ಮೋದಿಯವರ ಬಗ್ಗೆ ತಿಳಿದಿದೆ ಮತ್ತು ಅವರು ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬ ಬಗ್ಗೆಯೂ ಅರಿವಿದೆ. 2014ಕ್ಕೆ ಹೋಲಿಸಿದರೆ 2019ರಲ್ಲಿ ಜನರಿಗೆ ಮೋದಿಯವರ ನಾಯಕತ್ವದಲ್ಲಿ ಹೆಚ್ಚಿನ ನಂಬಿಕೆ ಇದೆ. ಜನರು ಅಭಿವೃದ್ಧಿ ಅಜೆಂಡಾಗೆ ಮತ ಹಾಕುವುದಿಲ್ಲ ಏಂಬುದನ್ನು ನಾನು ನಂಬಲಾರೆ’ ಎಂದಿದ್ದಾರೆ.
‘ಉಗ್ರ ಶಿಬಿರಗಳ ಮೇಲಿನ ದಾಳಿ ಚುನಾವಣಾ ಅಜೆಂಡಾವಲ್ಲ ಆದರೆ ಅದು ಭಯೋತ್ಪಾದನೆಯ ವಿರುದ್ಧದ ದಿಟ್ಟ ಕ್ರಮ. ದೇಶ ನರೇಂದ್ರ ಮೋದಿಯವರ ಸುರಕ್ಷಿತ ಕೈಗಳಲ್ಲಿ ಇದೆ ಎಂಬುದಕ್ಕೆ ಈ ದಾಳಿ ಸಾಕ್ಷಿಯಾಗಿದೆ’ ಎಂದರು.
ಪುಲ್ವಾಮ ದಾಳಿಯ ಬಳಿಕ ಸರ್ಕಾರ ವಿಶ್ರಾಂತಿಯನ್ನೇ ಪಡೆದುಕೊಂಡಿಲ್ಲ, ಭಾರತೀಯ ಪಡೆಗಳು ಎಲ್ಒಸಿಯನ್ನು ದಾಟಿ ಉಗ್ರ ಶಿಬಿರಗಳನ್ನು ನಾಶಪಡಿಸಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಸರ್ಜಿಕಲ್ ಸ್ಟ್ರೈಕ್ ಅನ್ನು ಸರಿಯಾಗಿ ಯೋಜಿಸಿ ಅನುಷ್ಠಾನಗೊಳಿಸಲಾಗಿತ್ತು. ಅದು ಯಶಸ್ವಿಯೂ ಆಗಿದೆ ಎಂದ ಅವರು, ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾ ಸೇನೆಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಗಡಿಯಲ್ಲಿ ಭಯೋತ್ಪಾದನಾ ಕೃತ್ಯ ಸ್ಥಗಿತವಾಗದೇ ಇದ್ದರೆ ಮತ್ತಷ್ಟು ದಾಳಿಗಳನ್ನು ನಡೆಸಲು ಭಾರತ ಹಿಂದೇಟು ಹಾಕುವುದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.