ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸದಾ ಟ್ವಿಟರ್ನಲ್ಲಿ ಸದ್ದು ಮಾಡುತ್ತಿರುತ್ತಾರೆ. ಆಗಾಗಾ ತಮ್ಮ ಟ್ವಿಟರ್ ಹಿಂಬಾಲಕರ ಪ್ರಶ್ನೆಗೆ ಅತ್ಯಂತ ಚಾಣಾಕ್ಷತನದಿಂದ ಅವರು ಉತ್ತರಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾಗುತ್ತಾರೆ. ಈ ಬಾರಿಯೂ ಅವರು, ನೀವ್ಯಾಕೆ ಚೌಕಿದಾರ್ ಎಂದು ಕೇಳಿದ ಪ್ರಶ್ನೆಗೆ ಅತ್ಯುದ್ಭುತವಾಗಿ ಪ್ರತಿಕ್ರಿಯಿಸಿ ಎಲ್ಲರ ಪ್ರಶಂಸೆ ಗಿಟ್ಟಿಸಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ‘ಮೈ ಭೀ ಚೌಕೀದಾರ್’ ಅಭಿಯಾನ ಆರಂಭವಾದ ಬಳಿಕ ಎಲ್ಲಾ ಬಿಜೆಪಿ ನಾಕಯರಂತೆ ಸುಷ್ಮಾ ಕೂಡ ಟ್ವಿಟರ್ ಹ್ಯಾಂಡಲ್ ನಲ್ಲಿ ತಮ್ಮ ಹೆಸರನ್ನು ‘ಚೌಕಿದಾರ್ ಸುಷ್ಮಾ ಸ್ವರಾಜ್’ ಎಂದು ಬದಲಾಯಿಸಿಕೊಂಡಿದ್ದಾರೆ. ಇದಕ್ಕೆ ವ್ಯಕ್ತಿಯೊಬ್ಬರು ‘ನೀವ್ಯಾಕೆ ಚೌಕಿದಾರ್?’ ಎಂದು ಪ್ರಶ್ನಿಸಿದ್ದಾರೆ.
ಈ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸುಷ್ಮಾ, ‘ಯಾಕೆಂದರೆ ವಿದೇಶದಲ್ಲಿ ಭಾರತದ ಹಿತಾಸಕ್ತಿ ಮತ್ತು ಅನಿವಾಸಿ ಭಾರತೀಯರ ಚೌಕಿದಾರಿಯನ್ನು ನಾನು ಮಾಡುತ್ತಿದ್ದೇನೆ’ ಎಂದಿದ್ದಾರೆ.
ಟ್ವಿಟರ್ನಲ್ಲಿ ಜನರ ಕುಂದು ಕೊರತೆಗಳನ್ನು ಆಲಿಸಿ, ಅದಕ್ಕೆ ಪರಿಹಾರ ನೀಡುವ ಸುಷ್ಮಾ ಅವರು ಎಲ್ಲರಿಗೂ ಅಚ್ಚುಮೆಚ್ಚಿನ ಸಚಿವೆ ಎನಿಸಿಕೊಂಡಿದ್ದಾರೆ.
2017ರಲ್ಲಿ ವ್ಯಕ್ತಿಯೊಬ್ಬ, ‘ನಾನು ಮಂಗಳ ಗ್ರಹದಲ್ಲಿ ಸಿಲುಕಿಕೊಂಡಿದ್ದೇನೆ, ಮಂಗಳಯಾನದ ಮೂಲಕ ನನಗೆ ಕಳುಹಿಸಲಾದ ಆಹಾರ ಖಾಲಿಯಾಗುತ್ತಿದೆ’ ಎಂದು ಹಾಸ್ಯಾಸ್ಪದವಾಗಿ ಟ್ವಿಟ್ ಮಾಡಿದ್ದ, ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಷ್ಮಾ ಅವರು, ‘ನೀವು ಮಂಗಳದಲ್ಲಿ ಸಿಕ್ಕಿ ಹಾಕಿಕೊಂಡಿದ್ದರೂ ಅಲ್ಲಿರುವ ಭಾರತೀಯ ರಾಯಭಾರ ಕಛೇರಿ ನಿಮಗೆ ಸಹಾಯ ಮಾಡುತ್ತದೆ’ ಎಂದು ಹಾಸ್ಯಭರಿತ ಪ್ರತಿಕ್ರಿಯೆಯನ್ನು ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.