ದಿಬ್ರುಘರ್: ವಿವಿಧ ಯೋಜನೆಗಳ ಮೂಲಕ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ಅವರ ಬಗ್ಗೆ ಅಸ್ಸಾಂನ ದಿಬ್ರುಘರ್ ಪ್ರದೇಶದ ಚಹಾ ಕಾರ್ಮಿಕರು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರ ನಮಗೆ ಬ್ಯಾಂಕ್ ಖಾತೆಗಳನ್ನು ಕೊಡಿಸಿದೆ ಮತ್ತು ಯಾವ ಮಧ್ಯವರ್ತಿಗಳೂ ಇಲ್ಲದೆ ನಮ್ಮ ಖಾತೆಗೆ ಹಣ ಜಮಾವಣೆ ಆಗುತ್ತಿದೆ ಎಂದು ಇವರು ಹರ್ಷ ವ್ಯಕ್ತಪಡಿಸಿದ್ದಾರೆ.
‘ನನಗೆ ರಾಜಕೀಯದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ, ಆದರೆ ಈಗ ಸಿಗುತ್ತಿರುವ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಬಗ್ಗೆ ನಮಗೆ ಸಂತೋಷವಿದೆ’ ಎಂದು ಚಹಾ ಕಾರ್ಮಿಕ ಮಹಿಳೆ ಸುನೀತ ಮೂರಾ ಹೇಳಿರುವುದನ್ನು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
‘ಈ ಭಾಗದ ಬಹುತೇಕ ಮಂದಿ ಚಹಾ ಕಾರ್ಮಿಕರು ಈಗ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ, ಇದರಿಂದಾಗಿ ಎಲ್ಲರೂ ಸಂತುಷ್ಟರಾಗಿದ್ದಾರೆ’ ಎಂಬುದನ್ನು ಮತ್ತೋರ್ವ ಕಾರ್ಮಿಕ ಮಹಿಳೆ ಫುಡೊ ಮೂರಾ ಹೇಳಿದ್ದಾರೆ.
ಸಾಮಾಜಿಕ ಕಾರ್ಯಕರ್ತೆ ಪರಗ್ ದತ್ತಾ ಅವರು ಮಾತನಾಡಿ, ಈ ಹಿಂದೆ ಹಲವಾರು ಬಾರಿ ಚಹಾ ಬೆಳೆಗಾರರ ಸಮಸ್ಯೆಯನ್ನು ಹಿಡಿದುಕೊಂಡು ದೆಹಲಿಗೆ ಪ್ರಯಾಣಿಸಿದ್ದೆ. ಆದರೆ ಮೊದಿ ಸರ್ಕಾರ ಬಂದ ಮೇಲೆ, ಪ್ರಧಾನ ಮಂತ್ರಿ ಕಾರ್ಯಾಲಯವು ಸಮಸ್ಯೆಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದನೆ ನೀಡಿದೆ ಎಂದಿದ್ದಾರೆ.
ಅಸ್ಸಾಂನಲ್ಲಿ ಅಪಾರ ಪ್ರಮಾಣದಲ್ಲಿ ಚಹಾ ಬೆಳೆಗಾರರು ಮತ್ತು ಚಹಾ ಕಾರ್ಮಿಕರು ಇದ್ದು ಅವರ ಸಮಸ್ಯೆಗಳು ಚುನಾವಣೆಯ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತದೆ. ಆದರೆ ಈ ಬಾರಿ ಚಹಾ ಕಾರ್ಮಿಕರು ಮೋದಿ ಪರವಾಗಿ ನಿಂತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.