ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ಭಾನುವಾರ ಎಪ್ರಿಲ್ 7ರಂದು ದೇಶದಾದ್ಯಂತ ಇರುವ ಮೊದಲ ಬಾರಿಯ ಮತದಾರರೊಂದಿಗೆ ಸಂವಾದ ನಡೆಸಲಿದ್ದಾರೆ. ತಮ್ಮ ಸರ್ಕಾರದ ಕಲ್ಯಾಣ ಯೋಜನೆಗಳ ಬಗ್ಗೆ ಅವರಿಗೆ ವಿವರಿಸಿ ಲೋಕಸಭಾ ಚುನಾವಣೆಯಲ್ಲಿ ಅವರ ಬೆಂಬಲವನ್ನು ಪಡೆಯುವ ಉದ್ದೇಶದಿಂದ ಈ ಸಂವಾದ ಕಾರ್ಯಕ್ರಮವನ್ನು ಆಯೋಜನೆಗೊಳಿಸಿದ್ದಾರೆ.
ಸುಮಾರು 9 ಕೋಟಿಯಷ್ಟು ಹೊಸ ಮತದಾರರು ಈ ಬಾರಿ ಮತ ಚಲಾವಣೆ ಮಾಡಲಿದ್ದಾರೆ. ಅವರೊಂದಿಗೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಅಭಿಯಾನ ಕೈಗೊಳ್ಳುವಂತೆ ಮೋದಿಯವರು ಸದಾ ತಮ್ಮ ಕಾರ್ಯಕರ್ತರಿಗೆ ಕರೆ ನೀಡುತ್ತಿರುತ್ತಾರೆ.
2000-01ನೇ ಇಸವಿಯಲ್ಲಿ ಜನಿಸಿದವರು ಈ ವರ್ಷ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅರ್ಹರಾಗಿದ್ದಾರೆ. ಈ ಮತದಾರರನ್ನು ಓಲೈಸಲು ಬಿಜೆಪಿ ಯುವ ಮೋರ್ಛಾ ಹಲವಾರು ಕಾರ್ಯಕ್ರಮಗಳನ್ನು ಈಗಾಗಲೇ ಹಮ್ಮಿಕೊಂಡಿದೆ. ಯೂತ್ ಪಾರ್ಲಿಮೆಂಟ್, ಟೌನ್ಹಾಲ್ ವಿದ್ ಯಂಗ್ ವೋಟರ್ಸ್ ಮತ್ತು ಕ್ಯಾಂಪಸ್ ಅಂಬಾಸಿಡರ್ಸ್ ಇಂತಹ ಕೆಲವು ಕಾರ್ಯಕ್ರಮಗಳಾಗಿವೆ.
2014ರ ಲೋಕಸಭಾ ಚುನಾವಣೆಯಲ್ಲಿ ಅಪಾರ ಸಂಖ್ಯೆಯ ಯುವ ಮತದಾರರು ಮೋದಿಯನ್ನು ಬೆಂಬಲಿಸಿದ್ದರು. ಇದು ಅವರ ಗೆಲುವಿನಲ್ಲಿ ಮಹತ್ವದ ಪಾತ್ರವನ್ನು ವಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.