ನವದೆಹಲಿ: ಪ್ರಜಾಪ್ರಭುತ್ವದ ಅತೀದೊಡ್ಡ ಹಬ್ಬ ಚುನಾವಣೆ ಆರಂಭಗೊಳ್ಳಲು ಇನ್ನು ಮೂರೇ ದಿನಗಳಿವೆ. ಎಪ್ರಿಲ್ 11ರಿಂದ ಚುನಾವಣೆ ಆರಂಭಗೊಳ್ಳಲಿದೆ. ಒಟ್ಟು 7 ಹಂತಗಳಲ್ಲಿ 543 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೇ.23ಕ್ಕೆ ಫಲಿತಾಂಶ ಹೊರಬೀಳಲಿದೆ. ಲೋಕಸಭಾ ಚುನಾವಣೆಗೆ ಸಜ್ಜಾಗಿರುವ ದೇಶದ ಅತೀದೊಡ್ಡ ಪಕ್ಷ, ಆಡಳಿತರೂಢ ಬಿಜೆಪಿ ಇಂದು ತನ್ನ ಚುನಾವಣಾ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಬಿಡುಗಡೆಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ವಿತ್ತ ಸಚಿವ ಅರುಣ್ ಜೇಟ್ಲಿ, ಗೃಹ ಸಚಿವ ರಾಜನಾಥ್ ಸಿಂಗ್ ಅವರು ಜೊತೆಗೂಡಿ ಸಂಕಲ್ಪ ಪತ್ರವನ್ನು ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಸೋಮವಾರ ಬಿಡುಗಡೆಗೊಳಿಸಿದ್ದಾರೆ. ಅನೇಕ ಬಿಜೆಪಿ ನಾಯಕರು ಈ ವೇಳೆ ಉಪಸ್ಥಿತರಿದ್ದರು.
‘ಈ ಪ್ರಣಾಳಿಕೆಯಲ್ಲಿ ಮಾಡಿದ ಎಲ್ಲಾ ಭರವಸೆಗಳೊಂದಿಗೆ ನಾವು ದೇಶವನ್ನು ನವ ಭಾರತವನ್ನಾಗಿಸುವ ನಿಟ್ಟಿನಲ್ಲಿ ಹೆಜ್ಜೆ ಮುಂದಿರುಸುತ್ತೇವೆ’ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಭಯೋತ್ಪಾದನೆಗೆ ಬಗ್ಗೆ ಶೂನ್ಯ ತಾಳ್ಮೆ ನೀತಿಯನ್ನು ನಾವು ವಹಿಸಲಿದ್ದು, ಭಯೋತ್ಪಾದನೆ ಸಂಪೂರ್ಣ ನಿರ್ಣಾಮವಾಗುವವರೆಗೂ ಈ ನೀತಿ ಮುಂದುವರೆಯಲಿದ್ದೇವೆ. ಇದನ್ನು ಪ್ರಣಾಳಿಕೆಯಲ್ಲಿ ಪುನರುಚ್ಚರಿಸಿದ್ದೇವೆ’ ಎಂದರು.
ರಾಮಮಂದಿರದ ವಿಷಯದ ಬಗ್ಗೆ ಹಿಂದಿನ ಚುನಾವಣೆಯಲ್ಲಿ ನೀಡಿದ ಭರವಸೆಯನ್ನು ನಾವು ಮುಂದುವರೆಸಿದ್ದೇವೆ. ಮಂದಿರ ನಿರ್ಮಾಣಕ್ಕೆ ಬೇಕಾದ ಎಲ್ಲಾ ಆಯ್ಕೆಗಳನ್ನೂ ನಮ್ಮ ಸರ್ಕಾರ ಬಳಸಿಕೊಳ್ಳಲಿದೆ, ಸೌಹಾರ್ದ ಮಾದರಿಯಲ್ಲಿ ಮಂದಿರ ಆದಷ್ಟು ಬೇಗ ನಿರ್ಮಾಣವಾಗಲಿದೆ’ ಎಂದಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ ರೂ.6000 ಧನಸಹಾಯವನ್ನು ಒದಗಿಸಲಿದ್ದೇವೆ, 60 ವರ್ಷ ಮೇಲ್ಪಟ್ಟ ಸಣ್ಣ ಮತ್ತು ಮಧ್ಯಮ ರೈತರಿಗೆ ಮಾಸಿಕ ಪಿಂಚಣಿ ಯೋಜನೆಯನ್ನು ಘೋಷಣೆ ಮಾಡಲಿದ್ದೇವೆ ಎಂದರು.
ಕಲಂ 370 ಮತ್ತು ಕಲಂ 35ಎ ಅನ್ನು ರದ್ದುಪಡಿಸಲು ಜನಸಂಘದ ಕಾಲದಿಂದಲೂ ನಾವು ಬದ್ಧತೆಯನ್ನು ತೋರಿದ್ದೇವೆ. ತಾರತಮ್ಯದ ಧೋರಣೆಯುಳ್ಳ ಇದನ್ನು ಸಾಂವಿಧಾನಿಕವಾಗಿ ರದ್ದುಪಡಿಸಲು ಬದ್ಧತೆ ಮುಂದುವರೆಸಲಿದ್ದೇಚೆ ಎಂದು ಪ್ರಣಾಳಿಕೆಯಲ್ಲಿ ಬಿಜೆಪಿ ಹೇಳಿದೆ.
ಪ್ರಮಾಣಿಕ ಮರುಪಾವತಿಯ ಭರವಸೆಯ ಮೇರೆಗೆ ಬಿಜೆಪಿ ಸರ್ಕಾರ ರೈತರಿಗೆ 1-5 ವರ್ಷಗಳ ಅವಧಿಗೆ ಶೂನ್ಯ ಬಡ್ಡಿದರದಲ್ಲಿ 1 ಲಕ್ಷ ರೂಪಾಯಿಯವರೆಗೆ ಸಾಲವನ್ನು ನೀಡಲಿದೆ ಎಂದು ಘೋಷಿಸಿದೆ.
2020ರ ವೇಳೆಗೆ ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ಪಣ, ಗ್ರಾಮೀಣ ಅಭಿವೃದ್ಧಿಗೆ 25 ಲಕ್ಷ ಕೋಟಿ ವ್ಯಯಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.
ಅಮಿತ್ ಷಾ ಮಾತನಾಡಿ ‘2022ರ ವೇಳೆಗೆ ಭಾರತದ ಸ್ವಾತಂತ್ರ್ಯ ಪಡೆದು 75 ವರ್ಷಗಳು ಪೂರೈಸಲಿದ್ದು, ಆ ವೇಳೆಗೆ ಈಡೇರುವ 75 ಭರವಸೆಗಳನ್ನು ನಾವು ನೀಡಿದ್ದೇವೆ’ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.