ನವದೆಹಲಿ: 2019ರ ಲೋಕಸಭಾ ಚುನಾವಣೆ ಆರಂಭವಾಗುತ್ತಿದ್ದಂತೆ, ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ದಾಖಲೆಯ ಮಟ್ಟದಲ್ಲಿ ಬಂದು ಮತದಾನ ಮಾಡುವಂತೆ ದೇಶದ ಜನರಿಗೆ ಕರೆಯನ್ನು ನೀಡಿದ್ದಾರೆ. ಇಂದು ದೇಶದಾದ್ಯಂತ ಮೊದಲ ಹಂತದ ಚುನಾವಣೆಗಳು ನಡೆಯುತ್ತಿವೆ.
‘2019ರ ಲೋಕಸಭಾ ಚುನಾವಣೆ ಇಂದು ಆರಂಭವಾಗಿದೆ. ಮೊದಲ ಹಂತದ ಚುನಾವಣೆಯನ್ನು ಎದುರಿಸುತ್ತಿರುವ ಎಲ್ಲಾ ಕ್ಷೇತ್ರದ ಜನರು ದಾಖಲೆಯ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ಅದಲ್ಲೂ ವಿಶೇಷವಾಗಿ ಮೊದಲ ಬಾರಿಯ ಮತದಾರರು ಮತ್ತು ಯುವ ಮತದಾರರು ಅಪಾರ ಪ್ರಮಾಣದಲ್ಲಿ ಮತ ಚಲಾಯಿಸಬೇಕು ಎಂದು ಕೇಳಿಕೊಳ್ಳುತ್ತೇನೆ’ ಎಂದಿದ್ದಾರೆ.
2019 Lok Sabha elections commence today.
I call upon all those whose constituencies are voting in the first phase today to turn out in record numbers and exercise their franchise.
I specially urge young and first-time voters to vote in large numbers.
— Chowkidar Narendra Modi (@narendramodi) April 11, 2019
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೂ ಅತ್ಯಧಿಕ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. ನಾಗ್ಪುರದ ಮತಗಟ್ಟೆ ಸಂಖ್ಯೆ 216ರಲ್ಲಿ ಮತಚಲಾಯಿಸಿದ ಬಳಿಕ ಅವರು ಈ ಕರೆಯನ್ನು ನೀಡಿದ್ದಾರೆ. ‘ಮನೆಯಿಂದ ಎಲ್ಲರೂ ಬಂದು ಮತದಾನ ಮಾಡಿ. ಯಾವ ಪಕ್ಷಕ್ಕೆ ನೀವು ಮತ ಚಲಾಯಿಸಿ ಎಂದರೆ ಆ ಪಕ್ಷ ವಿಜಯಿಯಾದಾಗ ಹಿಂದೂಸ್ಥಾನದಲ್ಲಿ ಸಂಭ್ರಮಾಚರಣೆ ಮಾಡಬೇಕೇ ವಿನಃ ಪಾಕಿಸ್ಥಾನದಲ್ಲಿ ಅಲ್ಲ. ಜೈ ಹಿಂದ್’ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಗ್ಪುರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನಾ ಪಾಟೋಲ್ ಕಣಕ್ಕಿಳಿದಿದ್ದಾರೆ.
घर से निकलें और वोट करें!
और वोट उस पार्टी को दें जिसके जीतने की खुशी हिंदुस्तान मनाए ना कि पाकिस्तान.
जय हिन्द— Mohan Bhagwat (@MohanBhagwat_) April 11, 2019
ಪಕ್ಷದ ಮುಖಂಡರು, ಗಣ್ಯರು ಮತದಾನದ ದಿನದಂದು ಪ್ರತಿಯೊಬ್ಬರೂ ಮತದಾನ ಮಾಡಿ, ಮತದಾನ ನಮ್ಮ ಕರ್ತವ್ಯ ಎಂದು ಕರೆ ನೀಡಿದ್ದಾರೆ.
18 ರಾಜ್ಯ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 91 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಉತ್ತರಪ್ರದೇಶದ 8, ಉತ್ತರಾಖಂಡದ 5, ಬಿಹಾರದಲ್ಲಿ 4, ಮಹಾರಾಷ್ಟ್ರದ 7, ಅಸ್ಸಾಂನ 5, ಒಡಿಶಾದ 4, ಜಮ್ಮು ಮತ್ತು ಕಾಶ್ಮೀರದ 2, ಅರುಣಾಚಲ ಪ್ರದೇಶದ 2, ಮೇಘಾಲಯದ 2 ಮತ್ತು ಪಶ್ಚಿಮ ಬಂಗಾಳದ 2, ಮತ್ತು ಛತ್ತೀಸ್ಗಢ, ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳ ತಲಾ ಒಂದು ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.