ಶ್ರೀನಗರ: ನಾನು ನನ್ನ ದೇಶಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ ಎಂದು ಕಾಶ್ಮೀರ ಪೂಂಚ್ನ ಐಎಎಸ್ ಪರೀಕ್ಷೆ ತೇರ್ಗಡೆಯಾದ ಮೊದಲ ಮಹಿಳೆ ರೆಹಾನಾ ಬಶೀರ್ ಹೇಳಿದ್ದಾರೆ.
ಯುಪಿಎಸ್ಸಿ ಪರೀಕ್ಷೆ ಫಲಿತಾಂಶಗಳು ಹೊರಬಿದ್ದ ತರುವಾಯ, ದೇಶದಾದ್ಯಂತದಿಂದ ಹಲವಾರು ಸ್ಪೂರ್ತಿದಾಯಕ ಕಥೆಗಳು ವೈರಲ್ ಆಗುತ್ತಿದೆ. ಅಂತಹ ಕಥೆಗಳಲ್ಲಿ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಸಲ್ವಾಹ್ ಗ್ರಾಮದ ರೆಹಾನಾ ಬಶೀರ್ ಅವರ ಕಥೆಯೂ ಒಂದು. ನಾಗರಿಕ ಸೇವಾ ಪರೀಕ್ಷೆಯಲ್ಲಿ ಇವರು ತೇರ್ಗಡೆಯಾಗಿದ್ದಾರೆ. ಇವರ ಸಹೋದರ ಕೂಡ ಇಂಡಿಯನ್ ರೆವೆನ್ಯೂ ಸರ್ವಿಸ್ ಅಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.
ರೆಹಾನಾ ಅವರು, ಶೇರ್ ಇ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜಿನಿಂದ ಎಂಬಿಬಿಎಸ್ ಪದವಿಯನ್ನು ಪಡೆದುಕೊಂಡಿದ್ದಾರೆ. ಎರಡನೇ ಪ್ರಯತ್ನದಲ್ಲಿ ಅವರು ತೇರ್ಗಡೆಯಾದ ಸಾಧನೆಯನ್ನು ಮಾಡಿದ್ದಾರೆ. ಸಮಾಜದ ಸಮಸ್ಯೆಗಳನ್ನು ತಳಮಟ್ಟಕ್ಕೆ ಇಳಿದು ತಿಳಿದುಕೊಳ್ಳಬೇಕೆಂಬ ಗುರಿಯೊಂದಿಗೆ ಅವರು ವೈದ್ಯಕೀಯ ಕ್ಷೇತ್ರವನ್ನು ಬಿಟ್ಟು ಐಎಎಸ್ನತ್ತ ಮುಖ ಮಾಡಿದ್ದಾರೆ.
ವೈದ್ಯಳಾದರೆ ಕೇವಲ ರೋಗಿಗಳ ಸಮಸ್ಯೆ ದೂರ ಮಾಡಬಹುದು, ಸಮಾಜದ ಸಮಸ್ಯೆಯನ್ನು ದೂರ ಮಾಡಲು ಸಾಧ್ಯವಿಲ್ಲ ಎನ್ನುವ ರೆಹಾನಾ, ಭಾರತದ ಯಾವುದೇ ರಾಜ್ಯದಲ್ಲಾದರೂ ಸೇವೆ ಸಲ್ಲಿಸಲು ಸಿದ್ಧ ಎಂದಿದ್ದಾರೆ.
ಸಮಾಜದಲ್ಲಿ ಬದಲಾವಣೆಯನ್ನು ತರುವುದು, ಸರ್ಕಾರದ ನೀತಿಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವುದು ನನ್ನ ಆದ್ಯತೆ ಎಂದು ಅವರು ಹೇಳುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.