ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈವರೆಗೆ 19 ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.
ತ್ರಿಶೂರ್ನಲ್ಲಿ 5, ಕಣ್ಣೂರು ಜಿಲ್ಲೆಯಲ್ಲಿ 4, ಪಟ್ಟಣಂತಿಟ್ಟದಲ್ಲಿ 3, ಕಾಸರಗೋಡು ಮತ್ತು ಇಡುಕ್ಕಿಯಲ್ಲಿ 2, ಮಲಪುರಂ, ಕೋಝಿಕೋಡ್ ಹಾಗೂ ಆಲಪುರಾದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಮಳೆಯಿಂದಾಗಿ ಒಟ್ಟಾರೆ 1425 ಲಕ್ಷ ರೂ. ಬೆಳೆ ಹಾನಿ ಸಂಭವಿಸಿದೆ. 87 ಮನೆಗಳು ಸಂಪೂರ್ಣ ಹಾನಿಯಾದರೆ, 2262 ಮನೆಗಳು ಭಾಗಶಃ ಹಾನಿಗೊಂಡಿವೆ. ಇದರಿಂದ 865.4 ಲಕ್ಷ ರೂ. ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.
ವಯನಾಡ್ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಅತ್ಯಧಿಕ 838.31 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಇಲ್ಲಿಯ ವೈತಿರಿ ಹಾಗೂ ಬತೇರಿ ತಾಲೂಕುಗಳಲ್ಲಿ ಪರಿಹಾರಾರ್ತವಾಗಿ ಶಿಬಿರಗಳನ್ನು ತೆರೆಯಲಾಗಿದೆ.
ಜೂ.28ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.