ನವದೆಹಲಿ: ಬಿಜೆಪಿ ಪಕ್ಷವು ಲೋಕಸಭಾ ಮತ್ತು ರಾಜ್ಯಸಭಾ ಎರಡರಲ್ಲೂ ಬಹುಮತವನ್ನು ಗಳಿಸಿದ ಬಳಿಕ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ ಕಲಂ 370 ಅನ್ನು ರದ್ದು ಪಡಿಸಲಾಗುವುದು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.
ಪ್ರಸ್ತುತ ಲೋಕಸಭೆಯಲ್ಲಿ ಬಿಜೆಪಿ ಬಹುಮತವನ್ನು ಹೊಂದಿದೆ, ಆದರೆ ರಾಜ್ಯಸಭೆಯಲ್ಲಿ ಅದಕ್ಕೆ ಬಹುಮತವಿಲ್ಲ.
ಗುಜರಾತಿನ ವಲ್ಸದ್ ಜಿಲ್ಲೆಯ ಧರ್ಮಪುರದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು, ರಾಷ್ಟ್ರೀಯ ಭದ್ರತೆ ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಪ್ರಧಾನ ವಿಷಯ ಆಗಿದೆ ಮತ್ತು ಬಿಜೆಪಿ ಪಕ್ಷಕ್ಕೆ ಮಾತ್ರ ರಾಷ್ಟ್ರೀಯ ಭದ್ರತೆಯನ್ನು ಒದಗಿಸಲು ಸಾಧ್ಯ ಎಂದಿದ್ದಾರೆ.
ಪುಲ್ವಾಮ ದಾಳಿಯ ಬಳಿಕ ನಡೆದ ಬಾಲಾಕೋಟ್ ವೈಮಾನಿಕ ದಾಳಿಯನ್ನು ಇಡೀ ದೇಶವೇ ಸಂಭ್ರಮಿಸುತ್ತಿದ್ದ ವೇಳೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಮಾತ್ರ ದುಃಖದಲ್ಲಿದ್ದವು ಎಂದಿದ್ದಾರೆ.
ಮೋದಿಗೆ ಮಾತ್ರ ಭಾರತವನ್ನು ಸೂಪರ್ ಪವರ್ ಮಾಡುವ ಸಾಮರ್ಥ್ಯ ಇದೆ ಎಂದಿರುವ ಅವರು, ಬಾಲಾಕೋಟ್ ದಾಳಿಯ ಬಗ್ಗೆ ಪಾಕಿಸ್ಥಾನ ಯಾಕೆ ಶೋಕಾಚರಣೆ ಮಾಡುತ್ತಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದರೆ ರಾಹುಲ್ ಗಾಂಧಿ ಅವರ ಪಕ್ಷ ಯಾಕೆ ಭಯೋತ್ಪಾದಕರ ಹತ್ಯೆ ಬಗ್ಗೆ ಶೋಕದಲ್ಲಿ ಮುಳುಗಿದೆ ಎಂಬುದು ತಿಳಿಯುವುದಿಲ್ಲ ಎಂದಿದ್ದಾರೆ.
ಶಾ ಅವರು ವಲ್ಸಡ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಸಂಸದ ಡಾಕ್ಟರ್ ಕೆ. ಸಿ. ಪಟೇಲ್ ಪರವಾಗಿ ಪ್ರಚಾರ ಕಾರ್ಯವನ್ನು ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.