ಕೊಡಗು : ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಭೀಕರ ನೆರೆಗೆ ತುತ್ತಾಗಿ ನೆಲೆಕಳೆದುಕೊಂಡ ಕುಟುಂಬಗಳ ನೆರೆವಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಸೇವಭಾರತಿ ನೇತೃತ್ವದಲ್ಲಿ ಅನೇಕ ಕಾರ್ಯಾಚರಣೆಗಳನ್ನು ನಡೆಸಿತು. ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಸೇವಭಾರತಿ ಸಂಯೋಜನೆಯಲ್ಲಿ ಸಂತ್ರಸ್ತ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಯಿತು. 2018 – 19 ಸಾಲಿನಲ್ಲಿ 11 ಪ್ರಾಥಮಿಕ & ಪ್ರೌಢಶಾಲಾ ವಿದ್ಯಾರ್ಥಿಗಳು, 14 ಪದವಿಪೂರ್ವ ವಿದ್ಯಾರ್ಥಿಗಳು, 4 ಪದವಿ ವಿದ್ಯಾರ್ಥಿಗಳು, 3 ಎಂಬಿಎ, 2 ಬಿಎಡ್, 2 ಕಾನೂನು, 1 ಇಂಜಿನಿಯರ್ ಸೇರಿದಂತೆ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 37 ವಿದ್ಯಾರ್ಥಿಗಳು ಉಚಿತ ಶಿಕ್ಷಣ ಪಡೆದಿದ್ದರು.
ಈ ಶೈಕ್ಷಣಿಕ ವರ್ಷದಲ್ಲೂ ಉಚಿತ ಶಿಕ್ಷಣ ಮುಂದುವರಿಸುವುದಾಗಿ ದಿನಾಂಕ 20/04/2019 ರಂದು ಕೊಡಗಿನ ಬಾಲಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಘೋಷಿಸಿದರು. ಈ ರೀತಿಯ ಪ್ರಕೃತಿ ವಿಕೂಪಗಳು ಮರುಕಳಿಸಿದಂತೆ ದೇವರನ್ನು ಪ್ರಾರ್ಥಿಸಿದ ಅವರು, ವಿಕೋಪಗಳಾದಾಗ ರಾಷ್ಟ್ರೀಯ ಸ್ವಯಂಸೇವಕ ಸಂಘ ನಡೆಸಿದ ಕಾರ್ಯಗಳನ್ನು ನೆನೆದರು.
ಸೇವಾ ಭಾರತಿ, ಕೊಡಗು ಸಂಸ್ಥೆಯ ಸಂಚಾಲಕ ಟಿ.ಸಿ.ಚಂದ್ರನ್ ಪ್ರಾಸ್ತಾವಿಕವಾಗಿ ಮಾತನಾಡಿ ಸೇವಾ ಭಾರತಿ ಸಂಸ್ಥೆ ಪ್ರಕೃತಿ ವಿಕೋಪ ಸಂಭವಿಸಿದ ದಿನದಿಂದಲೇ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. ಸೇವಾ ಭಾರತಿ ವತಿಯಿಂದ ಪ್ರಕೃತಿ ವಿಕೋಪಕ್ಕೆ ಒಳಗಾದ ಗ್ರಾಮಗಳ 28 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಹಾಗೂ ವಿವೇಕಾನಂದ ಕಾಲೇಜಿನಲ್ಲಿ 35 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ವ್ಯವಸ್ಥೆ ಮಾಡಲಾಗಿದೆ. ನಮ್ಮ ಸೇವಾ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿಯೂ ಮುಂದುವರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಭಾಗ ಕಾರ್ಯವಾಹ ನ.ಸೀತಾರಾಮ, ಪ್ರಾಂತ ಕಾರ್ಯಕಾರಿಣಿ ಸದಸ್ಯ ಗಣಪತಿ ಹಗಡೆ, ಸಹವಿಭಾಗ ಪ್ರಚಾರಕ್ ಉಮೇಶ್ ಹಾಗೂ ಇತರರು ಉಪಸ್ಥಿತರಿದ್ದರು.
ಸೇವಾ ಭಾರತಿಯ ಸದಸ್ಯರಾದ ಕೆ.ಕ ಮಹೇಶ್ ಸ್ವಾಗತಿಸಿ ಚಂದ್ರ ಉಡೋತ್ ಕಾರ್ಯಕ್ರಮ ನಿರೂಪಿಸಿದರೆ ಶಿವಾಜಿ ವಂದಿಸಿದರು. ಈ ಸಂದರ್ಭದಲ್ಲಿ ಸೇವಾ ಭಾರತಿ ಸಂಸ್ಥೆಯ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.