ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹಾರ ಪ್ರದೇಶದ ಬಗೇಂದ್ರ ಮೊಹಲ್ಲಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ಕೌಂಟರ್ ನಡೆದಿದ್ದು, ಘಟನೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಯೋಧರು ಮುಂದುವರೆಸಿದ್ದಾರೆ. ಗುರುವಾರ ಮುಸುಕಿನ ಜಾವದಲ್ಲಿ ಎನ್ಕೌಂಟರ್ ಆರಂಭಗೊಂಡಿದೆ.
ಗುಪ್ತಚರ ಇಲಾಖೆಯ ಖಚಿತ ಮಾಹಿತಿಯನ್ನು ಆಧರಿಸಿ ಸ್ಥಳಿಯ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಆರಂಭಿಸಿದವು. ಶೋಧ ಕಾರ್ಯಾಚರಣೆಯ ವೇಳೆ, ಭಯೋತ್ಪಾದಕರು ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಇದಕ್ಕೆ ಸೇನಾಪಡೆಗಳು ಪ್ರತ್ಯುತ್ತರ ನೀಡಿದ ಸಂದರ್ಭದಲ್ಲಿ ಎನ್ಕೌಂಟರ್ ಆರಂಭಗೊಂಡಿದೆ.
ಎನ್ಕೌಂಟರ್ ಜರುಗಿದ ಸ್ಥಳದಿಂದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಮೃತಪಟ್ಟ ಇಬ್ಬರು ಉಗ್ರರ ಗುರುತು ಮತ್ತು ಅವರು ಯಾವ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ಇನ್ನೂ ಖಚಿತವಾದ ಮಾಹಿತಿ ಲಭ್ಯವಾಗಿಲ್ಲ.
ಎನ್ಕೌಂಟರ್ ನಡೆದ ಸ್ಥಳದಲ್ಲಿ ಸ್ಪೋಟಕಗಳು ಇರುವುದರಿಂದ ಆ ಸ್ಥಳಕ್ಕೆ ಹೋಗದಂತೆ ನಾಗರಿಕರಿಗೆ ಪೊಲೀಸರು ಎಚ್ಚರಿಕೆಯನ್ನು ರವಾನಿಸಿದ್ದಾರೆ. ಸ್ಪೋಟಕಗಳನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಿದ ಬಳಿಕವೇ ಸಾರ್ವಜನಿಕರು ಇಲ್ಲಿ ಓಡಾಡಬಹುದು, ಅದುವರೆಗೆ ನಮ್ಮೊಂದಿಗೆ ಜನರು ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.