ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಬೆಂಬಲಿಸಿದ ಮುಸ್ಲಿಂ ಯುವಕನೊಬ್ಬ ಈಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ಗೆ ಒಳಗಾಗುತ್ತಿದ್ದಾನೆ ಮತ್ತು ಬೆದರಿಕೆ ಕರೆಗಳಿಂದ ಚಿತ್ರ ಹಿಂಸೆಯನ್ನು ಅನುಭವಿಸುತ್ತಿದ್ದಾನೆ. ಪ್ರಗ್ಯಾ ಸಿಂಗ್ ಅವರು, 2008ರ ಮಾಲೆಗಾಂವ್ ಸ್ಪೋಟ ಪ್ರಕರಣದ ಆರೋಪಿಯಾಗಿ ಬಳಿಕ ಕ್ಲೀನ್ ಚಿಟ್ ಪಡೆದುಕೊಂಡಿದ್ದಾರೆ.
ಸೈಯದ್ ಸದ್ದಾಂ ಅಲಿ, ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಸದಸ್ಯರಾಗಿದ್ದಾರೆ. ಪ್ರಗ್ಯಾ ಸಿಂಗ್ ಅವರು ಚುನಾವಣೆಗೆ ನಿಲ್ಲುತ್ತಿರುವುದನ್ನು ಇವರು ಸಮರ್ಥಿಸಿಕೊಂಡಿರುವುದಕ್ಕೆ ಇವರಿಗೆ ಬೆದರಿಕೆಗಳು ಬರುತ್ತಿವೆ.
‘ಪಕ್ಷದ ಸದಸ್ಯನಾಗಿ ಪ್ರಗ್ಯಾ ಕಣಕ್ಕಿಳಿಯುವುದನ್ನು ಬೆಂಬಲಿಸುವುದು ನನ್ನ ಕರ್ತವ್ಯ. ಆಕೆಗೆ ಬೆಂಬಲವನ್ನು ನೀಡಿ ನಾನು ಯಾವ ತಪ್ಪನ್ನೂ ಮಾಡಿಲ್ಲ. ಆದರೆ, ನನ್ನನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ, ಹಲವಾರು ಮಂದಿ ನನಗೆ ಫೋನ್ ಕರೆ ಮಾಡಿ ಬೆದರಿಕೆಯನ್ನು ಹಾಕುತ್ತಿದ್ದಾರೆ. ಬೆಂಬಲವನ್ನು ವಾಪಾಸ್ ಪಡೆಯಿರಿ ಎಂದು ಧಮ್ಕಿ ಹಾಕುತ್ತಿದ್ದಾರೆ’ ಎಂದಿದ್ದಾರೆ.
ಈ ಸಂಬಂಧ ಪೊಲೀಸರಿಗೆ ದೂರು ನೀಡಲು ಯೋಜಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.