ನವದೆಹಲಿ: ಖ್ಯಾತ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರ ಹೆಸರುಗಳನ್ನು ರಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗಳಿಗೆ ನಾಮನಿರ್ದೇಶನಗೊಳಿಸಿದೆ. ಈ ಪ್ರಶಸ್ತಿ ದೇಶದ ಕ್ರೀಡಾ ಸಾಧಕರಿಗೆ ನೀಡುವ ಅತ್ಯುನ್ನತ ಗೌರವವಾಗಿದೆ.
ವಿನೇಶ್ ಫೋಗಟ್ ಅವರು, 2014ರ ಗ್ಲಾಸ್ಗೋ ಮತ್ತು 2018ರ ಗೋಲ್ಡ್ ಕೋಸ್ಟ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬಂಗಾರದ ಪದಕವನ್ನು ಜಯಿಸಿದ್ದಾರೆ. ಇಂಚೋನ್ ಏಷ್ಯನ್ ಗೇಮ್ಸ್ನಲ್ಲಿ ಬಂಗಾರ ಮತ್ತು ಜಕಾರ್ತ ಏಷ್ಯನ್ ಗೇಮ್ಸ್ನಲ್ಲಿ ಕಂಚು ಗೆದ್ದಿದ್ದಾರೆ. 2016ರಲ್ಲಿ ಇವರಿಗೆ ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ಬಜರಂಗ್ ಪೂನಿಯಾ ಅವರು, 2018ರ ಏಷ್ಯನ್ ಗೇಮ್ಸ್ನಲ್ಲಿ ಬಂಗಾರ ಜಯಿಸಿದ್ದಾರೆ. ಗೋಲ್ಡ್ ಕೋಸ್ಟಾದ ಕಾಮನ್ವೆಲ್ತ್ನಲ್ಲಿ ಬಂಗಾರ ಜಯಿಸಿದ್ದಾರೆ. ರಸ್ಲಿಂಗ್ನಲ್ಲಿ ವಿಶ್ವ ನಂ. 1 ಪಟ್ಟಕ್ಕೇರಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2015 ರಲ್ಲಿ ಅರ್ಜುನ ಪ್ರಶಸ್ತಿ ಜಯಿಸಿದ್ದಾರೆ.
ಅಲ್ಲದೇ, ಈ ಬಾರಿಯ ಅರ್ಜುನ ಪ್ರಶಸ್ತಿಗಾಗಿ ರಾಹುಲ್ ಅವಾರೆ, ಹರ್ಪ್ರೀತ್ ಸಿಂಗ್, ದಿವ್ಯಾ ಕಾಕ್ರನ್ ಮತ್ತು ಪೂಜಾ ಧಂಡಾರನ್ನೂ ಸಹ WFI ಶಿಫಾರಸು ಮಾಡಿದೆ.
ವೀರೇಂದ್ರ ಕುಮಾರ್, ಸುಜೀತ್ ಮಾನ್, ನರೇಂದ್ರ ಕುಮಾರ್ ಮತ್ತು ವಿಕ್ರಮ್ ಕುಮಾರ್ ಅವರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಭೀಮ್ ಸಿಂಗ್ ಮತ್ತು ಜೈ ಪ್ರಕಾಶ್ ಅವರನ್ನು ಧ್ಯಾನ್ಚಂದ್ ಪ್ರಶಸ್ತಿಗೆ ಶಿಫಾರಸು ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.