ನವದೆಹಲಿ : ಜೀವನೋಪಾಯಕ್ಕಾಗಿ ಒಂದು ಕಾಲದಲ್ಲಿ ಚಹಾ ಮಾರುತ್ತಿದ್ದ ಬಿಜೆಪಿ ಪಾಲಿಕೆ ಸದಸ್ಯ ಅವತಾರ್ ಸಿಂಗ್ ಅವರು, ಸೋಮವಾರ ಉತ್ತರ ದೆಹಲಿಯ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಾತ್ರವಲ್ಲದೆ, ಮೇಯರ್ ಹುದ್ದೆಯನ್ನು ಏರಿದ ಮೊದಲ ದಲಿತ ಸಿಖ್ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಅವರು ಅವತಾರ್ ಸಿಂಗ್ ಅವರ ಹೆಸರನ್ನು ಚುನಾವಣೆಗೆ ನಾಮ ನಿರ್ದೇಶನಗೊಳಿಸಿದ್ದರು, ಬಳಿಕ ಮಹಾನಗರ ಪಾಲಿಕೆಯ ಪ್ರಧಾನ ಸಭೆಯಲ್ಲಿ ಇವರು ಅವಿರೋಧವಾಗಿ ಆಯ್ಕೆಯಾದರು.
“ಮೇಯರ್ ಹುದ್ದೆಯನ್ನು ಅಲಂಕರಿಸಿದ ಅವತಾರ್ ಸಿಂಗ್ ಅವರು ಅತ್ಯಂತ ಶ್ರಮಜೀವಿಯಾಗಿದ್ದಾರೆ. ಚಹಾ ಮಾರಾಟಗಾರನಾಗಿರುವ ಅವರು ತಮ್ಮ ಅವಿರತ ಪರಿಶ್ರಮದಿಂದ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ” ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
ಉತ್ತರ ದೆಹಲಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಬಹುಮತವಿದೆ, ಹೀಗಾಗಿ ಅವತಾರ್ ಸಿಂಗ್ ಅವರ ಆಯ್ಕೆ ಅತ್ಯಂತ ಸುಲಲಿತವಾಗಿತ್ತು.
ದಕ್ಷಿಣ ದೆಹಲಿಯ ಮೇಯರ್ ಆಗಿ ಬಿಜೆಪಿ ಪಾಲಿಕೆ ಸದಸ್ಯ ಅಂಜು ಕಾಂಗ್ರಾ ಅವರು ನೇಮಕಗೊಂಡಿದ್ದಾರೆ. ಪೂರ್ವ ದೆಹಲಿ ಮಹಾನಗರ ಪಾಲಿಕೆಗೆ ಬಿಜೆಪಿ ಪಾಲಿಕೆ ಸದಸ್ಯೆ ಅಂಜು ಕಮಲಾಕರ್ ಅವಿರೋಧವಾಗಿ ನೇಮಕವಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.