ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸುಪ್ರೀಂ ಕೋರ್ಟ್ನ ಆದೇಶವನ್ನು ತಿರುಚಿದ್ದಕ್ಕೆ ಮಂಗಳವಾರ ಕ್ಷಮಾಪಣೆಯನ್ನು ಕೇಳಿದ್ದಾರೆ.
ರಾಹುಲ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು, ರಾಹುಲ್ ಗಾಂಧಿಯ ಪರವಾಗಿ ಸಲ್ಲಿಸಲಾದ ಅಫಿಡವಿಟ್ನಲ್ಲಿ ಮೂರು ಲೋಪದೋಷಗಳಿವೆ, ಹೀಗಾಗಿ ಹೆಚ್ಚುವರಿ ಅಫಿಡವಿಟ್ ಅನ್ನು ಮೇ 6 ರಂದು ಸಲ್ಲಿಕೆ ಮಾಡುವುದಾಗಿ ತಿಳಿಸಿದ್ದಾರೆ. ಅದೇ ದಿನ ಸುಪ್ರೀಂನಲ್ಲಿ ವಿಚಾರಣೆ ನಡೆಯಲಿದೆ.
ಇಂದಿನ ವಿಚಾರಣೆಯ ಸಂದರ್ಭ ದೂರು ಸಲ್ಲಿಸಿರುವ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಪರ ವಾದ ಮಂಡಿಸುತ್ತಿರುವ ಮುಕ್ಕೋಟಿ ಅವರು ಚೌಕಿದಾರ್ ಚೋರ್ ಹೈ ವಿಷಯದಲ್ಲಿ ಸುಪ್ರೀಂ ಆದೇಶವನ್ನು ತಿರುಚಿದ ರಾಹುಲ್ ಗಾಂಧಿ ಅವರು ಕೇವಲ ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಆದರೆ ನ್ಯಾಯಾಂಗ ನಿಂದನೆ ಪ್ರಕರಣಗಳಲ್ಲಿ ಬೇಷರತ್ ಕ್ಷಮಾಪಣೆ ಕೇಳುವುದು ಅನಿವಾರ್ಯವಾಗುತ್ತದೆ ಎಂದು ವಾದಿಸಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಅವರು, ಸುಪ್ರೀಂಕೋರ್ಟ್ ಕೂಡ ಚೌಕಿದರ್ ಚೋರ್ ಹೈ ಎಂಬುದನ್ನು ಒಪ್ಪಿಕೊಂಡಿದೆ ಎಂದು ಹೇಳಿದ್ದರು. ಇದನ್ನು ವಿರೋಧಿಸಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಸುಪ್ರೀಂನಲ್ಲಿ ದೂರು ದಾಖಲು ಮಾಡಿದ್ದರು. ಬಳಿಕ ಸುಪ್ರೀಂ ರಾಹುಲ್ ಅವರಿಗೆ ನೋಟಿಸ್ ನೀಡಿ ವಿವರಣೆ ಕೇಳಿತ್ತು, ಆದರೆ ಕ್ಷಮಾಪಣೆ ಕೇಳುವ ಬದಲು ರಾಹುಲ್ ಅವರು ವಿಷಾದ ವ್ಯಕ್ತಪಡಿಸಿದ್ದರು.
ಇದೀಗ ಅವರು ತಮ್ಮ ಹೇಳಿಕೆಗೆ ಸುಪ್ರೀಂಕೋರ್ಟ್ ಮುಂದೆ ಕ್ಷಮಾಪಣೆಯನ್ನು ಕೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.