ನವದೆಹಲಿ: ಚುನಾವಣೆಯ ಸಂದರ್ಭದಲ್ಲಿ ಹಿಂಸಾಚಾರವನ್ನು ಎದುರಿಸುತ್ತಿರುವ ಪಶ್ಚಿಮಬಂಗಾಳದಲ್ಲಿ, ರಾಜ್ಯ ಪೊಲೀಸ್ ಪಡೆಗಳ ಬದಲು ಕೇಂದ್ರೀಯ ಪಡೆಗಳನ್ನು ನಿಯೋಜನೆಗೊಳಿಸಲು ಕೊನೆಗೂ ಚುನಾವಣಾ ಆಯೋಗ ನಿರ್ಧಾರವನ್ನು ತೆಗೆದುಕೊಂಡಿದೆ. ಮುಂದಿನ ಮೂರು ಹಂತಗಳ ಲೋಕಸಭಾ ಚುನಾವಣೆ ಅಲ್ಲಿ ಕೇಂದ್ರೀಯ ಪಡೆಗಳ ಭದ್ರತೆಯಲ್ಲಿ ಜರುಗಲಿದೆ.
ಕೇಂದ್ರೀಯ ಪಡೆಗಳನ್ನು ರವಾನಿಸದೇ ಹೋದರೆ ಚುನಾವಣೆಯನ್ನು ನಡೆಸುವುದಿಲ್ಲ, ಭದ್ರತೆ ನಮಗೆ ಅತ್ಯವಶ್ಯಕ ಎಂದು ಚುನಾವಣಾ ಸಿಬ್ಬಂದಿಗಳು ಬೆದರಿಕೆ ಹಾಕಿದ್ದರು, ಮಾತ್ರವಲ್ಲ ಅಪಾರ ಪ್ರಮಾಣದ ಸ್ಥಳಿಯರು ಕೂಡ ಕೇಂದ್ರೀಯ ಪಡೆಗಳನ್ನು ನಿಯೋಜಸದೆ ಹೋದರೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೇಳಿದ್ದರು, ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಕೇಂದ್ರೀಯ ಪಡೆಗಳನ್ನು ನಿಯೋಜಿಸಲು ನಿರ್ಧಾರ ಮಾಡಿದೆ.
ಇದುವರೆಗೆ ಪಶ್ಚಿಮಬಂಗಾಳದಲ್ಲಿ ನಾಲ್ಕು ಹಂತದ ಚುನಾವಣೆ ಜರುಗಿದೆ. ನಾಲ್ಕು ಹಂತದಲ್ಲೂ ಹಿಂಸಾಚಾರಗಳು ನಡೆದಿವೆ. ಅಲ್ಲಿನ ಆಡಳಿತರೂಢ ಪಕ್ಷದ ಕಾರ್ಯಕರ್ತರು ವಾಮಮಾರ್ಗದ ಮೂಲಕ ಚುನಾವಣೆಯನ್ನು ಗೆಲ್ಲಲು ಹಿಂಸಾಚಾರ ಭುಗಿಲೇಳುವಂತೆ ಮಾಡುತ್ತಿದ್ದಾರೆ ಎನ್ನಲಾಗಿದೆ.
ಇದೀಗ, ಕೇಂದ್ರೀಯ ಶಸ್ತ್ರಾಸ್ತ್ರ ಪಡೆಗಳ 660 ಕಂಪನಿಗಳು ಪಶ್ಚಿಮಬಂಗಾಳದಲ್ಲಿ ಚುನಾವಣೆಯ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜನೆಗೊಳ್ಳಲಿದೆ.
ದೇಶದ ಉಳಿದೆಲ್ಲಾ ರಾಜ್ಯಗಳಲ್ಲೂ ಚುನಾವಣೆ ಶಾಂತಿಯುತವಾಗಿ ನಡೆಯುತ್ತಿದೆ, ಆದರೆ ಪಶ್ಚಿಮಬಂಗಾಳದಲ್ಲಿ ಮಾತ್ರ ಅಹಿತಕರ ಘಟನೆಗಳು ಸಂಭವಿಸುತ್ತಿದೆ. ಸಿಎಂ ಮಮತಾ ಬ್ಯಾನರ್ಜಿಯವರು ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾಗಿರುವುದೇ ಇದಕ್ಕೆಲ್ಲಾ ಕಾರಣ ಎಂದು ಆರೋಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.