ನವದೆಹಲಿ : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಜೈಶೇ ಇ ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮತ್ತು ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 130 ಕೋಟಿ ಭಾರತೀಯರ ಪರವಾಗಿ ವಿಶ್ವ ಸಮುದಾಯಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಜೈಪುರದಲ್ಲಿ ಬುಧವಾರ ಸಂಜೆ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿರುವ ಮೋದಿಯವರು, “ಅಮೆರಿಕ ಮತ್ತು ನ್ಯೂಯಾರ್ಕ್ ನಿಂದ ಈಗಷ್ಟೇ ಸುದ್ದಿ ಬಂದಿದೆ. ಕುಖ್ಯಾತ ಭಯೋತ್ಪಾದಕ ಮತ್ತು ಜೈಷ್ ಇ ಮೋಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ವಿಶ್ವ ಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿದೆ. ಅಜರ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಲ್ಲಿ ವಿಶ್ವ ಸಮುದಾಯ ಒಗ್ಗಟ್ಟನ್ನು ಪ್ರದರ್ಶಿಸಿದ್ದು ತೃಪ್ತಿಕರವಾದ ಸಂಗತಿಯಾಗಿದೆ ಎಂದಿದ್ದಾರೆ.
ಅಲ್ಲದೇ, “ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ವಿಶ್ವ ಸಮುದಾಯವು ಭಾರತದ ಜೊತೆ ನಿಂತಿದೆ. ಇದಕ್ಕಾಗಿ 130 ಕೋಟಿ ಭಾರತೀಯರ ಪರವಾಗಿ ನಾನು ವಿಶ್ವ ಸಮುದಾಯಕ್ಕೆ ಧನ್ಯವಾದಗಳನ್ನು ಸಮರ್ಪಿಸುತ್ತೇನೆ “ಎಂದಿದ್ದಾರೆ.
ಭಯೋತ್ಪಾದನೆಯನ್ನು ತಳಮಟ್ಟದಿಂದ ನಿರ್ಮೂಲನೆ ಗೊಳಿಸುವ ಭಾರತದ ಸುದೀರ್ಘ ಕಾಲದ ಪ್ರಯತ್ನಕ್ಕೆ ಸಂದ ಅತಿ ದೊಡ್ಡ ಗೆಲುವು ಇದಾಗಿದೆ ಎಂದು ಅವರು ಬಣ್ಣಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.