ಭುವನೇಶ್ವರ: ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿರುವ ಫನಿ ಚಂಡಮಾರುತ ಇನ್ನು ಕೆಲವೇ ಗಂಟೆಗಳಲ್ಲಿ ಒರಿಸ್ಸಾ ಮತ್ತು ಪೂರ್ವ ಕರಾವಳಿ ಭಾಗವನ್ನು ಅಪ್ಪಳಿಸಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಪಾಯಕಾರಿ ಸ್ಥಳಗಳಲ್ಲಿನ ಲಕ್ಷಾಂತರ ಜನರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಫನಿ ಚಂಡಮಾರುತವು ಗಂಟೆಗೆ 200ಕಿಮೀ ವೇಗದಲ್ಲಿ ಅಪ್ಪಳಿಸುತ್ತಿದೆ ಮತ್ತು ಪುರಿ ಸುತ್ತಮುತ್ತ ತೀವ್ರ ಸ್ವರೂಪದ ಮಳೆಯಾಗುವ ನಿರೀಕ್ಷೆ ಇದೆ.
ಯಾವುದೇ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ಸಲುವಾಗಿ 81 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ನಿಯೋಜನೆಗೊಳಿಸಲಾಗಿದೆ. ವಾಯುಸೇನೆ, ನೌಕಾಸೇನೆ ಮತ್ತು ಭೂ ಸೇನೆಗಳು ಸರ್ವ ಸನ್ನದ್ಧ ರೀತಿಯಲ್ಲಿವೆ.
ಹವಮಾನ ಇಲಾಖೆಯು, ದೇಶದಾದ್ಯಂತ ಕರಾವಳಿ ಪ್ರದೇಶಗಳಿಗೆ ಜಾಗರೂಕವಾಗಿರುವಂತೆ ಎಚ್ಚರಿಕೆಯನ್ನು ನೀಡಿದೆ, ಒರಿಸ್ಸಾದ 14 ಜಿಲ್ಲೆಗಳಾದ ಪುರಿ, ಜಗತ್ಸಿಂಗ್ಪುರ್, ಕೇಂದ್ರಪರ, ಬಲಸೋರ್, ಭದ್ರಕ್, ಗಂಜಮ್, ಖುದ್ರಾ, ಜೈಪುರ, ನಯಾಘರ್, ಕಟಕ್, ಗಜಪತಿ, ಮಯೂರ್ಬಂಜ್, ಕಿಯೋಜ್ಹಾರ್ ಗಳಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ರವಾನಿಸಿದೆ.
ಪಶ್ಚಿಮಬಂಗಾಳದ ಮತ್ತು ಆಂಧ್ರಪ್ರದೇಶದ ಕರಾವಳಿ ಭಾಗಗಳಿಗೂ ಮುನ್ನೆಚ್ಚರಿಕೆಯನ್ನು ರವಾನಿಸಲಾಗಿದೆ. ಅಲ್ಲೂ ಜನರನ್ನು ಸುರಕ್ಷಿತ ತಾಣಕ್ಕೆ ಸ್ಥಳಾಂತರ ಮಾಡುವ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.
ಕಳೆದ ಮೂರು ದಿನಗಳ ಅವಧಿಯಲ್ಲಿ ಅಪಾಯಕಾರಿ ಸ್ಥಳಗಳಲ್ಲಿ ವಾಸಿಸುತ್ತಿದ್ದ ಬರೊಬ್ಬರಿ 11 ಲಕ್ಷಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ರವಾನೆ ಮಾಡಲಾಗಿದೆ ಎನ್ನಲಾಗಿದೆ.
ಸರ್ಮಪಕವಾಗಿ ವಿದ್ಯುತ್ ಪೂರೈಕೆಯಾಗುವಂತೆ, ಜನರಿಗೆ ಕುಡಿಯುವ ನೀರು ಮತ್ತು ಆಹಾರಗಳು ಸಮರ್ಪಕವಾಗಿ ಪೂರೈಕೆಯಾಗುವಂತೆ ಮಾಡುವ ನಿಟ್ಟಿನಲ್ಲಿ ಆಯಾ ಸಚಿವಾಲಯಗಳು ಶ್ರಮವಹಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.