ನವದೆಹಲಿ: ಅಧಿಕಾರದಲ್ಲಿದ್ದ ವೇಳೆ ಭಯೋತ್ಪಾದಕರ ವಿರುದ್ಧ ಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವೆ ಎಂದು ಹೇಳಿಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ತಿರುಗೇಟು ನೀಡಿದ್ದಾರೆ.
”ಅವರು ಮಾಡಿದ್ದು ಯಾವ ತರನಾದ ಸರ್ಜಿಕಲ್ ಸ್ಟ್ರೈಕ್? ಆ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಭಯೋತ್ಪಾದಕರಿಗೂ ಗೊತ್ತಿಲ್ಲ, ದೇಶದ ಜನರಿಗೂ ಗೊತ್ತಿಲ್ಲ, ಪಾಕಿಸ್ಥಾನಕ್ಕೂ ಗೊತ್ತಿಲ್ಲ. ಮೊದಲು ನಾವು ಮಾಡಿದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಟೀಕೆಯನ್ನು ಮಾಡುತ್ತಿದ್ದರು, ಈಗ ನಾವೂ ಮಾಡಿದ್ದೇವೆ ಎನ್ನುತ್ತಿದ್ದಾರೆ” ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಈ ದೇಶದ ಜನರನ್ನು ಕೇವಲ ವೋಟ್ ಬ್ಯಾಂಕಿಗಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
”ಕಾಂಗ್ರೆಸ್ ಪಕ್ಷವು ಸಮಾಜವನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ. ಹೀಗಾಗಿ ಎಲ್ಲಾ ವರ್ಗವನ್ನು ಒಟ್ಟಿಗೆ ಮುಂದಕ್ಕೆ ಕೊಂಡೊಯ್ಯುವ ಯೋಗ್ಯತೆ ಆ ಪಕ್ಷಕ್ಕೆ ಇರಲಿಲ್ಲ” ಎಂದಿದ್ದಾರೆ.
ಬಿಜೆಪಿಗೆ ಸಮಾಜದ ಪ್ರತಿ ವ್ಯಕ್ತಿಯೂ ಅತ್ಯಂತ ಮಹತ್ವಪೂರ್ಣವಾಗಿದ್ದು, ಪ್ರಗತಿ ಪ್ರತಿ ವ್ಯಕ್ತಿ, ಪ್ರತಿ ಕ್ಷೇತ್ರಕ್ಕೂ ತಲುಪಬೇಕು ಎಂಬ ನಿಟ್ಟಿನಲ್ಲಿ ನಾವು ಪ್ರಯತ್ನಪಡುತ್ತಿದ್ದೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.