ರಾಜಸ್ಥಾನ : ಭಾರತದ ನಾನಾ ಪ್ರದೇಶಗಳು ಪ್ರಸ್ತುತ ತೀವ್ರಸ್ವರೂಪದ ನೀರಿನ ಕೊರತೆಯನ್ನು ಎದುರಿಸುತ್ತಿವೆ. ಈ ಸಮಸ್ಯೆಯ ಗಂಭೀರತೆಯ ಬಗ್ಗೆ ಅರಿತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು, ದೇಶದಲ್ಲಿನ ನೀರಿನ ಕೊರತೆಯನ್ನು ನೀಗಿಸುವ ಸಲುವಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪನೆ ಮಾಡುವ ಭರವಸೆಯನ್ನು ನೀಡಿದ್ದಾರೆ.
ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿನ ನೀರಿನ ಸಮಸ್ಯೆಯನ್ನು ಹೋಗಲಾಡಿಸುವ ಸಲುವಾಗಿ ‘ಜಲಶಕ್ತಿ ಸಚಿವಾಲಯ’ ಎಂಬ ಹೆಸರಿನ ಹೊಸ ಸಚಿವಾಲಯವೊಂದನ್ನು ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.
ಈ ಭಾಗದಲ್ಲಿ ನೀರಿನ ಸಮಸ್ಯೆ ಅತಿ ದೊಡ್ಡ ವಿಷಯ ಎಂಬುದು ನನಗೆ ತಿಳಿದಿದೆ. ಈ ಸಮಸ್ಯೆಯನ್ನು ಹೋಗಲಾಡಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ ಜಲಶಕ್ತಿ ಸಚಿವಾಲಯವನ್ನು ಸ್ಥಾಪನೆ ಮಾಡುತ್ತೇವೆ. ದೇಶದಲ್ಲಿ ಮೊದಲ ಬಾರಿಗೆ ಇಂತಹದ್ದೊಂದು ಸಚಿವಾಲಯ ಆರಂಭಗೊಳ್ಳಲಿದೆ ಎಂದಿದ್ದಾರೆ.
ಭಾರತದಲ್ಲಿನ ನೀರಿನ ಸಂಪನ್ಮೂಲ ಬಳಕೆಯ ಬಗ್ಗೆ ಸಚಿವಾಲಯ ಹೆಚ್ಚಿನ ಗಮನವನ್ನು ನೀಡಲಿದೆ ಎಂದಿರುವ ಅವರು, ಜನರಿಗೆ ಸಾಕಾಗುವಷ್ಟು ನೀರನ್ನು ಒದಗಿಸುವ ಸಲುವಾಗಿ ಶತ ಪ್ರಯತ್ನವನ್ನು ಮಾಡುತ್ತೇನೆ ಎಂದು ರಾಜಸ್ಥಾನದ ಜನರಿಗೆ ಭರವಸೆಯನ್ನು ನೀಡಿದ್ದಾರೆ.
ಪ್ರಸ್ತುತ ಅಂತರ್ಜಲ ಬರಿದಾಗುತ್ತಾ ಸಾಗುತ್ತಿದೆ, ಈ ನಿಟ್ಟಿನಲ್ಲಿ ಸಮರ್ಪಕವಾದ ಕ್ರಮವನ್ನು ಕೈಗೊಳ್ಳುವ ಅನಿವಾರ್ಯತೆ ಇದೆ. ಸಂಪನ್ಮೂಲದ ಬಳಕೆ, ಸಂರಕ್ಷಣೆ ಬಗ್ಗೆ ಇದುವರೆಗೆ ಸರಕಾರಗಳು ಗಮನ ಹರಿಸಿದ್ದು ಕಡಿಮೆ. ಆದರೆ ಈಗ ಪ್ರಧಾನಿ ನರೇಂದ್ರ ಮೋದಿಯವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.