ನವದೆಹಲಿ : ರೈಲು ವಿಳಂಬವಾದ ಪರಿಣಾಮವಾಗಿ ವೈದ್ಯಕೀಯ ಪ್ರವೇಶ ಪರೀಕ್ಷೆ ನ್ಯಾಷನಲ್ ಎಲಿಜಿಬಿಲಿಟಿ ಕಂ ಎಂಟ್ರೆನ್ಸ್ ಟೆಸ್ಟ್ ಅನ್ನು ತಪ್ಪಿಸಿಕೊಂಡ ಕರ್ನಾಟಕದ ವಿದ್ಯಾರ್ಥಿಗಳಿಗೆ ಎರಡನೇ ಅವಕಾಶವನ್ನು ನೀಡುವುದಾಗಿ ಕೇಂದ್ರ ಸರಕಾರ ಘೋಷಣೆ ಮಾಡಿದೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು ಈ ವಿಷಯವನ್ನು ಟ್ವಿಟರ್ನಲ್ಲಿ ಘೋಷಣೆ ಮಾಡಿದ್ದು, ‘ರೈಲು ವಿಳಂಬದ ಪರಿಣಾಮವಾಗಿ ನೀಟ್ ಪರೀಕ್ಷೆಯನ್ನು ತಪ್ಪಿಸಿಕೊಂಡ ಕರ್ನಾಟಕದ ವಿದ್ಯಾರ್ಥಿಗಳಿಗೆ ಎರಡನೇ ಅವಕಾಶ ನೀಡುತ್ತಿರುವುದನ್ನು ಘೋಷಿಸಲು ಅತೀವ ಸಂತೋಷವಾಗುತ್ತದೆ’ ಎಂದಿದ್ದಾರೆ.
Happy to announce that #Karnataka Students who missed #NEET exam , due to railway delay will get another chance.@MoHFW_INDIA @HRDMinistry @PIB_India @MIB_India @DG_NTA @cbseindia29 @ciet_ncert @DDNewsLive @airnewsalerts @DVSBJP@CMofKarnataka
— Chowkidar Prakash Javadekar (@PrakashJavdekar) May 6, 2019
ಬೆಂಗಳೂರು ಕೇಂದ್ರದಲ್ಲಿ ನಡೆಯುತ್ತಿದ್ದ ನೀಟ್ ಪರೀಕ್ಷೆಗೆ ಹಾಜರಾಗಬೇಕಿದ್ದ ಹಲವಾರು ವಿದ್ಯಾರ್ಥಿಗಳು 16591 ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಬವಾದ ಕಾರಣ ಪರೀಕ್ಷೆಯನ್ನು ತಪ್ಪಿಸಿಕೊಂಡಿದ್ದರು. ರೈಲು ಬೆಂಗಳೂರಿಗೆ ಮಧ್ಯಾಹ್ನ 2.36 ಕ್ಕೆ ಬಂದು ತಲುಪಿತ್ತು. ಅಂದರೆ ಪರೀಕ್ಷೆ ಆರಂಭಕ್ಕಿಂತ ಬರೋಬ್ಬರಿ ಎಂಟು ಗಂಟೆಗಳ ಕಾಲ ವಿಳಂಬವಾಗಿ ಆಗಮಿಸಿತ್ತು. ಇದು ವಿದ್ಯಾರ್ಥಿಗಳನ್ನು ಕಂಗಾಲಾಗುವಂತೆ ಮಾಡಿತ್ತು, ಅವರ ಭವಿಷ್ಯ ಅತಂತ್ರ ಸ್ಥಿತಿಗೆ ತಲುಪಿತ್ತು.
ಕೇಂದ್ರ ಸಚಿವ ಸದಾನಂದಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶವನ್ನು ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದರು.
ಇದೀಗ ಕೇಂದ್ರ ಮಾನವ ಸಂಪನ್ಮೂಲವು ಸಚಿವಾಲಯ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವುದಾಗಿ ಘೋಷಣೆ ಮಾಡಿರುವುದರಿಂದ ವಿದ್ಯಾರ್ಥಿಗಳ ಮೊಗದಲ್ಲಿ ಸಂತಸ ಮೂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.